ಈಗ ಅವಕಾಶವಿದೆ, ದಲಿತ ಸಿಎಂ ಮಾಡಿ ತೋರಿಸಿ | ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸವಾಲು - Mahanayaka
5:36 AM Wednesday 9 - September 2026

ಈಗ ಅವಕಾಶವಿದೆ, ದಲಿತ ಸಿಎಂ ಮಾಡಿ ತೋರಿಸಿ | ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸವಾಲು

siddaramaiha
23/07/2021

ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಿರುವ ರಾಜ್ಯ ಬಿಜೆಪಿಯವರು ದಲಿತರನ್ನು ಮುಖ್ಯಮಂತ್ರಿ ಮಾಡಿ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಬಹಳಷ್ಟು ಮಂದಿ ದಲಿತರು ಬೇರೆ ಬೇರೆ ರಾಜ್ಯಗಳಲ್ಲಿ ಮುಖ್ಯಮಂತ್ರಿಗಳಾಗಿದ್ದಾರೆ. ಕರ್ನಾಟಕದಲ್ಲಿ ಈಗ ಬಿಜೆಪಿಯವರಿಗೆ ಅವಕಾಶ ಇದೆ. ಯಡಿಯೂರಪ್ಪ ಅವರನ್ನು ಹೇಗೂ ತೆಗೆಯುತ್ತಾರೆ. ಅವರ ನಂತರ ದಲಿತರನ್ನು ಮುಖ್ಯಮಂತ್ರಿ ಮಾಡಲಿ ಎಂದು ಸವಾಲು ಹಾಕಿದರು.

ದಲಿತರ ಮೇಲೆ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ನಾಯಕರಿಗೆ ಪ್ರೀತಿ ಇಲ್ಲವೇ? ಕಾಂಗ್ರೆಸ್ ನ್ನು ಪ್ರಶ್ನಿಸಲು ಬರುವ ಅವರಿಗೆ ಸಾಮಾಜಿಕ ಬದ್ಧತೆ ಇದ್ದರೆ,  ಈಗ ರಾಜ್ಯದಲ್ಲಿ ದಲಿತ ಸಿಎಂ ಮಾಡಲು ಅವಕಾಶವಿದೆ. ನಿಮ್ಮ ಬದ್ಧತೆಯನ್ನು ತೋರಿಸಿ ಎಂದು ನಳಿನ್ ಕುಮಾರ್ ಕಟೀಲ್ ಅವರಿಗೆ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಇನ್ನಷ್ಟು ಸುದ್ದಿಗಳು…

ಬಿಗ್ ಬ್ರೇಕಿಂಗ್ ನ್ಯೂಸ್: ರಾಜೀನಾಮೆ ಬಗ್ಗೆ  ಸಿಎಂ ಯಡಿಯೂರಪ್ಪರಿಂದ ಮಹತ್ವದ ಹೇಳಿಕೆ

ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸುವುದು ಸೂಕ್ತವಲ್ಲ | ಎನ್.ಮಹೇಶ್

ಅಶ್ಲೀಲ ಚಿತ್ರಗಳ ವ್ಯಾಪಾರದಿಂದ ರಾಜ್ ಕುಂದ್ರಾಗೆ ದಿನವೊಂದಕ್ಕೆ ಬರುತ್ತಿದ್ದ ಆದಾಯ ಎಷ್ಟು ಲಕ್ಷ ಗೊತ್ತಾ?

ವಿಡಿಯೋದಲ್ಲಿ ಬೆತ್ತಲಾಗಲು ರಾಜ್ ಕುಂದ್ರಾ  ಹೇಳಿದ್ದರು ಎಂದ ಯೂಟ್ಯೂಬ್ ಸ್ಟಾರ್ | ಶಿಲ್ಪಾ ಶೆಟ್ಟಿ ಪತಿಯ ಮತ್ತೊಂದು ಕರ್ಮಕಾಂಡ ಬಯಲು

 

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti