ದಲಿತ ಯುವಕನ ಮೇಲೆ ವಿಕೃತಿ ಮೆರೆದ ಪಿಎಸ್ ಐ ಸಸ್ಪೆಂಡ್: ಪ್ರಕರಣ ಸಿಐಡಿಗೆ ವರ್ಗಾವಣೆ - Mahanayaka
10:11 PM Thursday 19 - September 2024

ದಲಿತ ಯುವಕನ ಮೇಲೆ ವಿಕೃತಿ ಮೆರೆದ ಪಿಎಸ್ ಐ ಸಸ್ಪೆಂಡ್: ಪ್ರಕರಣ ಸಿಐಡಿಗೆ ವರ್ಗಾವಣೆ

arjun
24/05/2021

ಚಿಕ್ಕಮಗಳೂರು: ದಲಿತ ಯುವಕನಿಗೆ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಬಂಧಿಸಿ, ಲಾಕಪ್ ನಲ್ಲಿ ಚಿತ್ರಹಿಂಸೆ ನೀಡಿ, ಸಹ ಕೈದಿಯೋರ್ವನ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್‌ಐ ಅರ್ಜುನ್​ ನನ್ನು ಅಮಾನತು ಮಾಡಲಾಗಿದೆ.

ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಈ ಬಗ್ಗೆ ಆದೇಶ ಹೊರಡಿಸಿದ್ದು, ಗೋಣಿಬೀಡು ಪಿಎಸ್‌ಐ ಅರ್ಜುನ್‌ ನನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಆರೋಪಿ ಅರ್ಜುನ್ ನ ದುಷ್ಟ ಕೃತ್ಯದ ಬಳಿಕ ಆತನನ್ನು ಉಡುಪಿಗೆ ವರ್ಗಾವಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆದಿತ್ತು. ಆದರೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಆತನನ್ನು ಅಮಾನತು ಮಾಡಿ ಆದೇಶಿಸಲಾಗಿದೆ.


Provided by

ಇನ್ನೂ  ದಲಿತ ಯುವಕ ಪುನೀತ್ ನ ಮೇಲಿನ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಲಾಗಿದೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ. ಸದ್ಯ ಆರೋಪಿಯನ್ನು ಅಮಾನತು ಮಾಡಿ ಆದೇಶ ನೀಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಮರ್ಪಕ ಕ್ರಮ ನಡೆಯದ ಹಿನ್ನೆಲೆಯಲ್ಲಿಸಾರ್ವಜನಿಕರ ಆಕ್ರೋಶದ ಬಗ್ಗೆ ಮಹಾನಾಯಕ ಮಾಧ್ಯಮದಲ್ಲಿ ನಿನ್ನೆ ವರದಿ ಪ್ರಕಟವಾಗಿತ್ತು.

ಇತ್ತೀಚಿನ ಸುದ್ದಿ