ವೋಟ್ ಬ್ಯಾಂಕ್ ಗಾಗಿ ದಸರಾ ಹೆಸರಲ್ಲಿ ಜನರ ತೆರಿಗೆ ಹಣ ಲೂಟಿ | ಸುನೀಲ್‌ ಕುಮಾರ್ ಬಜಾಲ್ ಆರೋಪ - Mahanayaka
12:18 AM Monday 16 - September 2024

ವೋಟ್ ಬ್ಯಾಂಕ್ ಗಾಗಿ ದಸರಾ ಹೆಸರಲ್ಲಿ ಜನರ ತೆರಿಗೆ ಹಣ ಲೂಟಿ | ಸುನೀಲ್‌ ಕುಮಾರ್ ಬಜಾಲ್ ಆರೋಪ

mangalore protest
13/10/2021

ಮಂಗಳೂರು: ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ. ಮಾತ್ರವಲ್ಲ, ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್  ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸಮಾನ ಮನಸ್ಕ ಸಂಘಟನೆ, ಪಕ್ಷಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆಯು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಹಲವು ನೆಪಗಳ ಮುಂದಿಟ್ಟುಕೊಂಡು ಅಭಿವೃದ್ಧಿ ಕೆಲಸವನ್ನು ಕುಂಠಿತಗೊಳಿಸಿದೆ. ಈ ಹಿಂದೆ ಅಭಿವೃದ್ಧಿ ಕೆಲಸಗಳಿಗಾಗಿ ಎಡಿಬಿಯಿಂದ ಎರಡು ಹಂತದಲ್ಲಿ ತಂದಿರುವ ಕೋಟ್ಯಾಂತರ ರೂಪಾಯಿ ಸಾಲವನ್ನು ಸಂದಾಯ ಮಾಡಲು ಬಾಕಿ ಇರಿಸಿದೆ. ಕಳೆದ ವರ್ಷದ ಮೂರು ಕೋಟಿಯಷ್ಟು ಮೆಸ್ಕಾಂನ ವಿದ್ಯುತ್ ಬಿಲ್ ಕೂಡಾ ಪಾವತಿಸಿಲ್ಲ. ಇಷ್ಟೊಂದು ಸಾಲ ಇರಿಸಿಕೊಂಡು ದಸರಾ ಹಬ್ಬದ ಹೆಸರಲ್ಲಿ ದೀಪಾಲಂಕಾರಕ್ಕಾಗಿ ಹಣ ವ್ಯಯಿಸುವುದು ಎಷ್ಟು ಸರಿ..? ಎಂದು ಪ್ರಶ್ನಿಸಿದರು.

ಜನರಿಂದ ತೆರಿಗೆ ರೂಪದಲ್ಲಿ ಸಂಗ್ರಹಿಸಿದ ಹಣವನ್ನು ಈ ರೀತಿ‌ ಖರ್ಚು ಮಾಡಲು ಸರಕಾರಗಳ ನಿಯಮಗಳಲ್ಲಿ ಯಾವುದೇ ಅವಕಾಶಗಳಿಲ್ಲ. ಪಾಲಿಕೆಯ ಬಿಜೆಪಿ‌ ಆಡಳಿತ ಈ ಕೂಡಲೇ ಮಂಜೂರು‌ ಮಾಡಿರುವ 38 ಲಕ್ಷ ಹಣವನ್ನು ರದ್ದುಪಡಿಸಬೇಕೆಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.


Provided by

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಪಕ್ಷದ ಮುಖಂಡರೂ, ಮಾಜಿ ಕಾರ್ಪೊರೇಟರ್ ಗಳಾದ ದಯಾನಂದ ಶೆಟ್ಟಿ, ಜಯಂತಿ ಶೆಟ್ಟಿ, ಜೆಡಿಎಸ್‌ ನ ಸುಮತಿ ಎಸ್ ಹೆಗ್ಡೆ, ಡಿವೈಎಫ್ ಐ ಜಿಲ್ಲಾ ಕಾರ್ಯದರ್ಶಿ ‌ಸಂತೋಷ್ ಬಜಾಲ್ ರವರು ಮಾತನಾಡಿ, ಜನತೆಯ ತೆರಿಗೆಯ ಹಣವನ್ನು ಲಪಟಾಯಿಸಲು ಹುನ್ನಾರ ನಡೆಸುವ ಬಿಜೆಪಿ ಆಡಳಿತಕ್ಕೆ ಛೀಮಾರಿ ಹಾಕಿದರು.

ಈ ವೇಳೆ ಡಿವೈಎಫ್ ಐ ಮಂಗಳೂರು ನಗರ ಮುಖಂಡರಾದ ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ಪ್ರಮೀಳಾ ಶಕ್ತಿನಗರ, ಮನೋಜ್ ಉರ್ವಾಸ್ಟೋರ್ , ಸಿಪಿಐ ಪಕ್ಷದ ಮುಖಂಡರಾದ ವಿ.ಕುಕ್ಯಾನ್, ಕರುಣಾಕರ್, ದಲಿತ ಹಕ್ಕುಗಳ ಸಮಿತಿಯ ನಾಯಕರಾದ ತಿಮ್ಮಯ್ಯ ಕೊಂಚಾಡಿ, ಕೃಷ್ಣ ತಣ್ಣೀರುಬಾವಿ,ರಘುವೀರ್, CPIM ಮುಖಂಡರಾದ ಬಾಬು‌ ದೇವಾಡಿಗ, ಅಶೋಕ್ ಸಾಲ್ಯಾನ್, ಉದಯಚಂದ್ರ ರೈ, ನಾಗೇಶ್ ಕೋಟ್ಯಾನ್, ಸಾಮಾಜಿಕ ಚಿಂತಕರಾದ ಪ್ರಮಿಳಾ ದೇವಾಡಿಗ,, ಜೆಡಿಎಸ್ ಮುಖಂಡರಾದ ಹರ್ಷಿತ, ಅಲ್ತಾಫ್ ತುಂಬೆ, ಶಾರದಾ, ಶಿವಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ನೈತಿಕತೆ ಇಲ್ಲದಾಗ ಆಕ್ಷನ್ಸ್, ರಿಯಾಕ್ಷನ್ಸ್ ಆಗುತ್ತೆ | ಅನೈತಿಕ ಪೊಲೀಸ್ ಗಿರಿ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಕಲೆಕ್ಷನ್ ಪಾರ್ಟಿ: ಸಲೀಂ-ಉಗ್ರಪ್ಪ ಆರೋಪಕ್ಕೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಏನು ಗೊತ್ತಾ?

Uthra murder case: ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಕೊಂದವನಿಗೆ ಜೀವಾವಧಿ ಶಿಕ್ಷೆ

ಡಿಕೆಶಿ ಕುಡುಕರಂತೆ ತೊದಲುತ್ತಾರೆ, ಕಲೆಕ್ಷನ್ ಗಿರಾಕಿ | ಮೈಕ್ ಆನ್ ಆಗಿರೋದು ತಿಳಿಯದೇ ಮಾತನಾಡಿ ಕಾಂಗ್ರೆಸ್ ನಾಯಕರ ಯಡವಟ್ಟು!

ಬಾಲಕಿಗೆ ಹೆರಿಗೆಯಾದ ಬಳಿಕ ಬಾಲ್ಯ ವಿವಾಹ ಬಯಲಿಗೆ: ಬಾಲಕಿಯ ಪತಿ ಅರೆಸ್ಟ್

ತರಕಾರಿ ವ್ಯಾಪಾರಿಯ ಹನಿಟ್ರ್ಯಾಪ್: ಯುವತಿ ಸಹಿತ ಮೂವರು ಆರೋಪಿಗಳ ಅರೆಸ್ಟ್

ಅವಿದ್ಯಾವಂತರು ದೇಶಕ್ಕೆ ಹೊರೆ, ಅವರು ಉತ್ತಮ ನಾಗರಿಕನಾಗಲು ಹೇಗೆ ಸಾಧ್ಯ? | ಅಮಿತ್ ಶಾ

ಇತ್ತೀಚಿನ ಸುದ್ದಿ