ಅಧಿಕಾರಿಗಳ ಅಮಾನತಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಆದೇಶ - Mahanayaka

ಅಧಿಕಾರಿಗಳ ಅಮಾನತಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಆದೇಶ

d k shivakumar
05/06/2023

ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ ಗಳನ್ನು ಇವತ್ತು ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದರು.


Provided by

ಈ ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಶಿವಕುಮಾರ್ ಅವರು ಸಭೆಯಲ್ಲಿ ಪ್ರಶ್ನಿಸಿದರು.

ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡಬಡಾಯಿಸಿದರು. ತಕ್ಷಣವೇ ಉಪಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ