ದೇಶದಾದ್ಯಂತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ: ಹಿಂದೂ ಜನಜಾಗೃತಿ ಸಮಿತಿ - Mahanayaka

ದೇಶದಾದ್ಯಂತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ: ಹಿಂದೂ ಜನಜಾಗೃತಿ ಸಮಿತಿ

udupi
17/09/2022

ಉಡುಪಿ: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ದೇಶದಾದ್ಯಂತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಂಡಿದ್ದು, ಆ. 31 ರಿಂದ ನ. 8 ರ ವರೆಗೆ ನಡೆಯಲಿದೆ. ಈ ಅಭಿಯಾನದಲ್ಲಿ ದೇಶದಾದ್ಯಂತ 2000 ಕ್ಕೂ ಅಕ ಸ್ಥಳಗಳಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ತೆಗೆದುಕೊಳ್ಳಲಾಗುವುದೆಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ಸಮನ್ವಯಕ ಗುರುಪ್ರಸಾದ ಗೌಡ ತಿಳಿಸಿದ್ದಾರೆ.


Provided by

ಶುಕ್ರವಾರ ನಗರದ ಪತ್ರಿಕಾಭವನದಲ್ಲಿ ಕರೆದ ಮಾತನಾಡಿದ ಅವರು, ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನದಲ್ಲಿ ಹಿಂದೂ ರಾಷ್ಟ್ರದ ಅವಶ್ಯಕತೆ, ಹಿಂದೂ ಧರ್ಮದ ಮಹಾನತೆ, ಶೌರ್ಯ ಜಾಗೃತಿಯ ಅಗತ್ಯ, ಲವ್ ಜಿಹಾದ್, ಹಲಾಲ್ ಜಿಹಾದ್ ಇತ್ಯಾದಿ ವಿಷಯಗಳಲ್ಲಿ 3 ಸಾವಿರ ಸ್ಥಳಗಳಲ್ಲಿ ಪ್ರವಚನಗಳು, 2000 ಕ್ಕೂ ಅಕ ಸ್ಥಳಗಳಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಮೂಡಿಸುವ ಲಕಗಳ ಪ್ರದರ್ಶನ ನಡೆಯಲಿದೆ ಎಂದರು.

1,000 ದೇವಾಲಯಗಳು ಮತ್ತು 250 ಕ್ಕೂ ಅಧಿಕ ಐತಿಹಾಸಿಕ ಸ್ಥಳಗಳ ಸ್ವಚ್ಛತೆ, 350 ಮಹಿಳಾ ಸಂಘಟನೆಗಳ ಉಪಕ್ರಮ ಮತ್ತು ಸಮ್ಮೇಳನ, 50 ಕಡೆಗಳಲ್ಲಿ ವರ್ಧಂತ್ಯುತ್ಸವ ಸಮಾರಂಭಗಳು, 50 ಕಡೆಗಳಲ್ಲಿ ಹಿಂದೂ ರಾಷ್ಟ್ರ ವಿಚಾರ ಸಂಕಿರಣ, 70 ಕಡೆ ಬೀದಿ ನಾಟಕಗಳು, 200 ಕ್ಕೂ ಅಕ ವಿವಿಧ ಸಂಘಟನೆಗಳ ಸಭೆಗಳು, 60 ಕ್ಕೂ ಹೆಚ್ಚು ವಕೀಲರ ಸಭೆ ಇತ್ಯಾದಿ ಉಪಕ್ರಮಗಳನ್ನು ದೇಶದಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.


Provided by

ಹಿಂದೂ ಸಮಾಜದ ಮನಸ್ಸಿನಲ್ಲಿ ಹಿಂದೂ ರಾಷ್ಟ್ರ ಸಂಕಲ್ಪವನ್ನು ಬಲಪಡಿಸುವ ಮತ್ತು ಹಿಂದೂ ಸಮಾಜವು ಹಿಂದೂ ರಾಷ್ಟ್ರಕ್ಕಾಗಿ ಸಕ್ರಿಯವಾಗಬೇಕೆನ್ನುವ ದೃಷ್ಟಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಸನಾತನ ಸಂಸ್ಥೆ ರಾಷ್ಟ್ರೀಯ ವಕ್ತಾರ ಚೇತನ್ ರಾಜಹಂಸ, ಮುಖಂಡ ರಾಮಕೃಷ್ಣ ಶೆಟ್ಟಿ ಕುಂದಾಪುರ, ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕ ವಿಜಯ ಕುಮಾರ್ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ