ಖ್ಯಾತ ಸಾಹಿತಿ ಡಾ.ಸಿದ್ದಲಿಂಗಯ್ಯ ಕೊರೊನಾಕ್ಕೆ ಬಲಿ - Mahanayaka
7:14 PM Friday 20 - September 2024

ಖ್ಯಾತ ಸಾಹಿತಿ ಡಾ.ಸಿದ್ದಲಿಂಗಯ್ಯ ಕೊರೊನಾಕ್ಕೆ ಬಲಿ

dr siddalingaiah
11/06/2021

ಬೆಂಗಳೂರು: ಸಾಹಿತಿ ಡಾ.ಸಿದ್ದಲಿಂಗಯ್ಯನವರು ಕೊರೊನಾ ವೈರಸ್ ಗೆ ಬಲಿಯಾಗಿದ್ದು,  ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ.

ಖ್ಯಾತ ಕವಿ, ಸಾಹಿತಿಯಾಗಿದ್ದ ಸಿದ್ದಲಿಂಗಯ್ಯನವರು ಕೊರೊನಾ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಸಿದ್ದಲಿಂಗಯ್ಯನವರು ಕನ್ನಡದ ಲೇಖಕರಲ್ಲೊಬ್ಬರು. ‘ದಲಿತ ಕವಿ’ ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿರುವವರು.


Provided by

ಕವನ ಸಂಕಲನಗಳು
ಹೊಲೆ ಮಾದಿಗರ ಹಾಡು
ಮೆರವಣಿಗೆ
ಸಾವಿರಾರು ನದಿಗಳು
ಕಪ್ಪು ಕಾಡಿನ ಹಾಡು
ಆಯ್ದಕವಿತೆಗಳು
ಅಲ್ಲೆಕುಂತವರೆ
ನನ್ನ ಜನಗಳು ಮತ್ತು ಇತರ ಕವಿತೆಗಳು
ಸಮಕಾಲೀನ ಕನ್ನಡ ಕವಿತೆ

ವಿಮರ್ಶನಾ ಕೃತಿಗಳು
ಹಕ್ಕಿ ನೋಟ,
ರಸಗಳಿಗೆಗಳು
ಎಡಬಲ
ಉರಿಕಂಡಾಯ

ಲೇಖನಗಳ ಸಂಕಲನ
ಅವತಾರಗಳು
ಸದನದಲ್ಲಿ ಸಿದ್ದಲಿಂಗಯ್ಯ ಭಾಗ
ಸದನದಲ್ಲಿ ಸಿದ್ದಲಿಂಗಯ್ಯ ಭಾಗ

ನಾಟಕಗಳು
ಏಕಲವ್ಯ
ನೆಲಸಮ
ಪಂಚಮ

ಗೌರವ, ಪ್ರಶಸ್ತಿಗಳು
ಉತ್ತಮ ಚಲನಚಿತ್ರಗೀತ ರಚನೆಗಾಗಿ ಕರ್ನಾಟಕ ಸರ್ಕಾರ ಪ್ರಶಸ್ತಿ
ರಾಜ್ಯೋತ್ಸವ ಪ್ರಶಸ್ತಿ -ಕರ್ನಾಟಕ ಸರ್ಕಾರ
ಡಾ.ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ
ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ
ಜಾನಪದ ತಜ್ಞ ಪ್ರಶಸ್ತಿ
2 ಬಾರಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ.
ಸಂದೇಶ್ ಪ್ರಶಸ್ತಿ
ಡಾ.ಅಂಬೇಡ್ಕರ್ ಪ್ರಶಸ್ತಿ
ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ
ಬಾಬುಜಗಜೀವನರಾಮ್ ಪ್ರಶಸ್ತಿ
ನಾಡೋಜ ಪ್ರಶಸ್ತಿ
ಪ್ರೆಸಿಡೆನ್ಸಿ ಇನ್ಷಿಟ್ಯೂಷನ್ ಪ್ರಶಸ್ತಿ
ಆಳ್ವಾಸ್ ನುಡಿಸಿರಿ ಪ್ರಶಸ್ತಿ
ಶ್ರವಣಬೆಳಗೊಳದಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು.
ನೃಪತುಂಗ ಪ್ರಶಸ್ತಿ
ಪಂಪ ಪ್ರಶಸ್ತಿ

ಇತ್ತೀಚಿನ ಸುದ್ದಿ