ಸೌಜನ್ಯ ಪ್ರಕರಣ: ಭಕ್ತರಿಗೆ ವಿಶೇಷ ಮನವಿ ಮಾಡಿದ ಡಾ.ವೀರೇಂದ್ರ ಹೆಗ್ಗಡೆ - Mahanayaka

ಸೌಜನ್ಯ ಪ್ರಕರಣ: ಭಕ್ತರಿಗೆ ವಿಶೇಷ ಮನವಿ ಮಾಡಿದ ಡಾ.ವೀರೇಂದ್ರ ಹೆಗ್ಗಡೆ

verendra hegde
02/08/2023

ದಕ್ಷಿಣ ಕನ್ನಡ ಜಿಲ್ಲೆಯ ಸೌಜನ್ಯ ಸಾವು ಪ್ರಕರಣ ಸದ್ಯ ಕೋರ್ಟ್, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇದೆ. ಹೀಗಾಗಿ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ. ಈ ವಿಚಾರವಾಗಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದೆಂದು ವಿನಂತಿಸುತ್ತೇನೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.


Provided by

2012 ರಲ್ಲಿ ನಡೆದ ಪಾಂಗಳ ನಿವಾಸಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಸಿ.ಐ.ಡಿ. ನಂತರದಲ್ಲಿ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿ.ಬಿ.ಐ. ಮೂಲಕ ತನಿಖೆ ನಡೆಸುವಂತೆ ಸರಕಾರವನ್ನು ಶ್ರೀಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸಲಾಗಿತ್ತು. ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಲಾಗಿದೆ. ಅದರಂತೆ ತನಿಖೆ ನಡೆಸಿ ಸದರಿ ಇಲಾಖೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಇದಾದ ನಂತರ ಕೋರ್ಟ್ ವಿಚಾರಣೆ ನಡೆಸಿ ಆರೋಪಿಯನ್ನು ಸದರಿ ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದು ತಿಳಿದಿದೆ. ಆ ನಂತರದಲ್ಲಿ ಕೆಲವು ವ್ಯಕ್ತಿಗಳು ಶ್ರೀ ಕ್ಷೇತ್ರವನ್ನು ಹಾಗೂ ನಮ್ಮ ಕುಟುಂಬವನ್ನು ಗುರಿಯಾಗಿರಿಸಿಕೊಂಡು ಸುಳ್ಳು ಆರೋಪ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದರಿಂದ ಶ್ರೀಕ್ಷೇತ್ರದ ಭಕ್ತರಲ್ಲಿ ಹಾಗೂ ಕ್ಷೇತ್ರದೊಂದಿಗೆ ತೊಡಗಿಸಿಕೊಂಡಿರುವ ಅನೇಕರಿಗೆ ಖೇದ ಉಂಟಾಗಿದ್ದು ಈ ಮೂಲಕ ಸಮಸ್ತ ಭಕ್ತಾದಿಗಳಲ್ಲಿ ಹಾಗೂ ಸಾರ್ವಜನಿಕರ ಗಮನಕ್ಕೆ ತರ ಬಯಸುವುದೆಂದರೆ ಈ ಪ್ರಕರಣದ ಬಗ್ಗೆ ಶ್ರೀ ಕ್ಷೇತ್ರದ ವತಿಯಿಂದ ಈಗಾಗಲೇ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಲಾಗಿತ್ತು. ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ. ಆ ಪ್ರಕಾರ ಸರ್ಕಾರ ಅತ್ಯುನ್ನತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿ ನ್ಯಾಯಾಲಯಕ್ಕೆ ಪ್ರಕರಣವನ್ನು ವಿಚಾರಣೆಗಾಗಿ ಒಳಪಡಿಸಿರುತ್ತದೆ.


Provided by

ಸೌಜನ್ಯ ಸಾವು ಪ್ರಕರಣ ಪ್ರಸ್ತುತ ನ್ಯಾಯಾಲಯ, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಹಾಗು ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ. ಈ ವಿಚಾರವಾಗಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗು ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದಾಗಿ ವಿನಂತಿಸುತ್ತೇನೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ