ದ್ವೇಷ, ಹಿಂಸಾಚಾರ ಹುಟ್ಟುಹಾಕುವ ಉದ್ದೇಶ 'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಹಿಂದಿದೆ: ಸೀತಾರಾಮ್ ಯೆಚೂರಿ - Mahanayaka
1:17 PM Thursday 19 - September 2024

ದ್ವೇಷ, ಹಿಂಸಾಚಾರ ಹುಟ್ಟುಹಾಕುವ ಉದ್ದೇಶ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಹಿಂದಿದೆ: ಸೀತಾರಾಮ್ ಯೆಚೂರಿ

shivaraj yechury
25/03/2022

ಶ್ರೀನಗರ: ದ್ವೇಷ, ಹಿಂಸಾಚಾರ ಹುಟ್ಟುಹಾಕುವ ಉದ್ದೇಶ ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಹಿಂದಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಇಂತಹ ಚಿತ್ರಗಳು ದೇಶವನ್ನು ತೊಂದರೆಗೆ ಸಿಲುಕಿಸುತ್ತವೆ. ಅಲ್ಲದೆ, ದಿ ಕಾಶ್ಮೀರ್ ಫೈಲ್ಸ್ ಚಿತ್ರವು ಎರಡು ಸಮುದಾಯಗಳ ನಡುವೆ ಅಂತರ ಸೃಷ್ಟಿಸುವ ಉದ್ದೇಶವನ್ನು ಹೊಂದಿದೆ ಎಂದರು.

ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಎಲ್ಲರೂ ನೋಡಬೇಕೆಂದು ಪ್ರಧಾನಿ ಹೇಳುತ್ತಾರೆ. ಆದರೆ ಗೋಧ್ರಾ ಹಕ್ಕುಗಳ ಚಲನಚಿತ್ರವಾದ ಪರ್ಜಾನಿಯಾವನ್ನು ವೀಕ್ಷಿಸಲು ಅವರು ಜನರಿಗೆ ಅಂತಹ ಕರೆ ಕೊಟ್ಟಿಲ್ಲ. ಆಗಿನ ರಾಜ್ಯಪಾಲರ ಪಾತ್ರವನ್ನೂ ಕಾಶ್ಮೀರಿ ಪಂಡಿತರ ವಲಸೆ ನಿಟ್ಟಿನಲ್ಲಿ ತನಿಖೆಗೊಳಪಡಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.


Provided by

ಅಂದು ಕಾಶ್ಮೀರದಲ್ಲಿ ನಡೆದ ಹಿಂಸಾಚಾರದಲ್ಲಿ ಕೇವಲ ಕಾಶ್ಮೀರಿ ಪಂಡಿತರು ಮಾತ್ರ ಸಾವನ್ನಪ್ಪಿಲ್ಲ. ಸಿಖ್ಖರು ಮತ್ತು ಮುಸ್ಲಿಮರೂ ಜೀವ ಕಳೆದುಕೊಂಡಿದ್ದಾರೆ. ದ್ವೇಷದ ರಾಜಕಾರಣ ದೇಶದ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಉಳಿಯಬೇಕಾದರೆ ಎಡಪಂಥೀಯ ಶಕ್ತಿಗಳು ಬಲಗೊಳ್ಳಬೇಕು ಎಂದು ಸೀತಾರಾಮ್ ಯೆಚೂರಿ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭಯೋತ್ಪಾದಕರ ಹೆಸರಲ್ಲಿ ಸೈನಿಕರನ್ನು ಬಿಜೆಪಿ ಕೊಂದಿದೆ: ಶಿವರಾಜ್ ತಂಗಡಗಿ

ಮಾತುಬಾರದ ಬಾಲಕನ ಹತ್ಯೆ: ಗೋಣಿ ಚೀಲದಲ್ಲಿ ತುಂಬಿ ಎಸೆದ ದುಷ್ಕರ್ಮಿಗಳು

ಕಾಶ್ಮೀರ ಹತ್ಯಾಕಾಂಡ: ಮರು ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಸಿಮೆಂಟ್ ಲಾರಿಗಳ ನಡುವೆ ಭೀಕರ ಅಪಘಾತ: ಚಾಲಕ ಸಜೀವ ದಹನ

ಇತ್ತೀಚಿನ ಸುದ್ದಿ