ಜೆಡಿಎಸ್‌ ನಲ್ಲಿ ಟ್ರ್ಯಾಪ್ ಆಗೋರು ಯಾರು ಇಲ್ಲ: ಹನಿಟ್ರ್ಯಾಪ್ ಬಗ್ಗೆ ಮಾಜಿ ಶಾಸಕ ಅನ್ನದಾನಿ ಹೇಳಿಕೆ

annadani
26/03/2025

ಬೆಂಗಳೂರು: ನಮ್ಮ ಜೆಡಿಎಸ್‌ ನಲ್ಲಿ ಟ್ರ್ಯಾಪ್ ಆಗೋರು ಯಾರು ಇಲ್ಲ ಎಂದು ಜೆಡಿಎಸ್ ಮಾಜಿ ಶಾಸಕ ಅನ್ನದಾನಿ ಹೇಳಿಕೆ ನೀಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹನಿಟ್ರ‍್ಯಾಪ್ ವಿಚಾರವಾಗಿ ಜೆಪಿ ಭವನದಲ್ಲಿ ಪ್ರತಿಕ್ರಿಯೆ ನೀಡಿದ ಅವರು,  ಹನಿಟ್ರ‍್ಯಾಪ್ ಕೇಸ್ ಯಾರಿಗೂ ಶೋಭೆ ತರೋದಿಲ್ಲ, ಕಾಂಗ್ರೆಸ್ ದೇಶಕ್ಕೆ ಕಳಂಕ ತರುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ನನ್ನಂತ ಪ್ರಾಮಾಣಿಕ ರಾಜಕಾರಣ ಆದವರಿಗೆ ಇಂತಹ ವಿಷಯ ಬೇಸರ ತರಿಸುತ್ತದೆ. ನಾವು ಯಾವತ್ತು ರಾಜಕೀಯ ವ್ಯಭಿಚಾರದ ಕೆಲಸ ಮಾಡಿಲ್ಲ. ದೇವೇಗೌಡರ ಮಾರ್ಗದರ್ಶನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ

Exit mobile version