ಒಂದು ಕೆನ್ನೆಗೆ ಹೊಡೆದಾಗ ಇನ್ನೊಂದು ಕೆನ್ನೆ ತೋರಿಸಿದರೆ, ಸಿಗೋದು ಸ್ವಾತಂತ್ರ್ಯ ಅಲ್ಲ, ಭಿಕ್ಷೆ | ಮತ್ತೆ ಕಂಗನಾ ಟೀಕೆ - Mahanayaka
8:18 AM Tuesday 17 - September 2024

ಒಂದು ಕೆನ್ನೆಗೆ ಹೊಡೆದಾಗ ಇನ್ನೊಂದು ಕೆನ್ನೆ ತೋರಿಸಿದರೆ, ಸಿಗೋದು ಸ್ವಾತಂತ್ರ್ಯ ಅಲ್ಲ, ಭಿಕ್ಷೆ | ಮತ್ತೆ ಕಂಗನಾ ಟೀಕೆ

kangana
17/11/2021

ನವದೆಹಲಿ: ಒಂದು ಕೆನ್ನೆಗೆ ಹೊಡೆದಾಗ ಇನ್ನೊಂದು ಕೆನ್ನೆ ತೋರಿಸು ಎಂಬ ಬಾಪು(ಗಾಂಧೀಜಿ) ಮಂತ್ರ ಅನುಸರಿಸಿದರೆ, ಸ್ವಾತಂತ್ರ್ಯ ಸಿಗುವುದಿಲ್ಲ. ಬದಲಾಗಿ ಭಿಕ್ಷೆ ಸಿಗುತ್ತದೆ ಎಂದು ಗಾಂಧಿಯ ಅಹಿಂಸಾ ಹೋರಾಟವನ್ನು ನಟಿ ಕಂಗನಾ ರಣಾವತ್ ಗೇಲಿ ಮಾಡಿದ್ದಾರೆ.

ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಗಾಂಧಿಯ ಬಗ್ಗೆ ಟೀಕಿಸಿದ ಅವರು,  ಗಾಂಧೀಜಿ ಅವರಿಂದ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಗೆ ಬೆಂಬಲವೇ ಸಿಗಲಿಲ್ಲ, ಒಂದು ಕೆನ್ನೆಗೆ ಬಾರಿಸಿದರೆ, ಇನ್ನೊಂದು ಕೆನ್ನೆ ತೋರಿಸು ಎಂಬುದನ್ನು ಅನುಸರಿಸಿದರೆ, ಸ್ವಾತಂತ್ರ್ಯ ಸಿಗುವುದಿಲ್ಲ, ಬದಲಾಗಿ ಭಿಕ್ಷೆ ಸಿಗುತ್ತದೆ ಎಂದು ಕಂಗನಾ ಮತ್ತೊಮ್ಮೆ ದೇಶಕ್ಕೆ ದೊರಕಿದ ಸ್ವಾತಂತ್ರ್ಯವನ್ನು ಗೇಲಿ ಮಾಡಿದ್ದಾರೆ.

ಗಾಂಧಿ, ಭಗತ್ ಸಿಂಗ್ ಅಥವಾ ಸುಭಾಷ್ ಚಂದ್ರಬೋಸ್ ಅವರನ್ನು ಎಂದಿಗೂ ಬೆಂಬಲಿಸಲಿಲ್ಲ. ಅವರನ್ನು ಗಲ್ಲಿಗೇರಿಸಬೇಕು ಎಂದು ಬಯಸಿದ್ದರು ಎನ್ನುವುದಕ್ಕೆ ಪುರಾವೆ ಇದೆ. ಹೀಗಾಗಿ ನೀವು ಯಾರನ್ನು ಬೆಂಬಲಿಸಬೇಕು ಎನ್ನುವುದನ್ನು ಆಯ್ಕೆ ಮಾಡಿಕೊಳ್ಳಿ ಎಂದು ಕಂಗನಾ ಹೇಳಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

“ಸತ್ಯ ನುಡಿದಿದ್ದಕ್ಕೆ ಹಂಸಲೇಖ ಕ್ಷಮೆಯಾಚಿಸಿದರು” | ಹಂಸಲೇಖ ಅವರಿಗೆ ವ್ಯಕ್ತವಾಗುತ್ತಿದೆ ಭಾರೀ ಬೆಂಬಲ

ಪರೀಕ್ಷೆ ಬರೆದು ಪಾಸ್ ಆದ 104 ವರ್ಷದ ಕುಟ್ಟಿಯಮ್ಮಗೆ ಅಭಿನಂದನೆಗಳ ಮಹಾಪೂರ

ಅವನಿಗೆ ನನ್ನ ದೃಷ್ಟಿಯೇ ತಾಗಿತೇನೋ… | ಕಣ್ಣೀರು ಹಾಕುತ್ತಲೇ ಮಾತನಾಡಿದ ನಟ ಶಿವರಾಜ್ ಕುಮಾರ್

ಬಿಟ್ ಕಾಯಿನ್  ಪ್ರಮುಖ ಆರೋಪಿ  ಶ್ರೀಕಿಯ ಎನ್ ಕೌಂಟರ್ ಸಾಧ್ಯತೆ?

ಅಪಘಾತದಲ್ಲಿ ಮೃತಪಟ್ಟ ಪುನೀತ್ ಅಭಿಮಾನಿ ಕೊನೆಯ ಕ್ಷಣದಲ್ಲಿ ಪತ್ನಿಗೆ ಹೇಳಿದ ಮಾತು ಕಣ್ಣೀರು ತರಿಸುತ್ತದೆ!

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ: 14 ರಾಜ್ಯಗಳ 76 ಸ್ಥಳಗಳಲ್ಲಿ ಜಾಲಾಡಿದ ಸಿಬಿಐ

ಇತ್ತೀಚಿನ ಸುದ್ದಿ