ಹಣ ನೀಡಿ ನಿಮ್ಮನ್ನು ಸಚಿವರಾಗಿ ಮಾಡ್ತೇವೆ ಅಂದಿದ್ರು: ಹೊಸ ಬಾಂಬ್ ಸಿಡಿಸಿದ ರೇಣುಕಾಚಾರ್ಯ
![renukacharya](https://www.mahanayaka.in/wp-content/uploads/2022/05/renukacharya-1.jpg)
ದಾವಣಗೆರೆ: ನನಗೂ ಕೆಲವು ಬ್ರೋಕರ್ ಗಳು ಹಣ ನೀಡಿ ನಿಮ್ಮನ್ನು ಸಚಿವರನ್ನಾಗಿ ಮಾಡ್ತೀವಿ ಅಂತ ಹೇಳಿದ್ದರು ಎಂದು ಸಚಿವ ರೇಣುಕಾಚಾರ್ಯ ಹೇಳಿಕೆ ನೀಡಿದ್ದು, ಇತ್ತೀಚೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯ ಬಳಿಕ ರೇಣುಕಾಚಾರ್ಯ ಕೂಡ ಈ ಹೇಳಿಕೆ ನೀಡಿದ್ದಾರೆ.
ನನಗೆ ಅವರು ಗೊತ್ತು, ಇವರು ಗೊತ್ತು ಎಂದು ಹೇಳಿದ್ದ ಬ್ರೋಕರ್ಸ್ ಹಣ ನೀಡಿದರೆ, ಸಚಿವರನ್ನಾಗಿ ಮಾಡುವುದಾಗಿ ಹೇಳಿದ್ದರು ಎಂದು ರೇಣುಕಾಚಾರ್ಯ ಹೇಳಿದ್ದು, ಬಿಜೆಪಿಯೊಳಗೆ ಸಚಿವ ಸ್ಥಾನ ಕೊಡಿಸುವ ದೊಡ್ಡ ಡೀಲ್ ನಡೆಯುತ್ತಿರುವ ಅನುಮಾನಗಳಿಗೆ ರೇಣುಕಾಚಾರ್ಯ ಹೇಳಿಕೆ ಕಾರಣವಾಗಿದೆ.
ಒಂದೆಡೆ ಪಕ್ಷದಲ್ಲಿ ಬ್ರೋಕರ್ ಗಳ ವಿಚಾರವನ್ನು ಪ್ರಸ್ತಾಪಿಸಿ ಮತ್ತೊಂದೆಡೆ ಪಕ್ಷವನ್ನು ರೇಣುಕಾಚಾರ್ಯ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿಯಲ್ಲಿ ಸಚಿವ ಸ್ಥಾನ ಮಾರಾಟಕ್ಕಿಲ್ಲ ಎಂದು ನಾನು ಛೀಮಾರಿ ಹಾಕಿ ಕಳುಹಿಸಿದೆ ಎಂದು ಅವರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಲೈಂಗಿಕ ಕ್ರಿಯೆಯ ಬಳಿಕ ನೆನಪಿನ ಶಕ್ತಿ ಕಳೆದುಕೊಂಡ ವೃದ್ಧ!
ಮಳಲಿ ಮಸೀದಿ ವಿವಾದಕ್ಕೆ ಎಸ್ ಡಿಪಿಐ ಬಳಿಕ ಕಲ್ಲಡ್ಕ ಪ್ರಭಾಕರ್ ಭಟ್ ಎಂಟ್ರಿ!
ಅತಿಯಾಗಿ ಟೀ ಕುಡಿಯುತ್ತೀರಾ? ಹಾಗಿದ್ದರೆ, ಕಾದಿದೆ ಅಪಾಯ!
ಮುಸ್ಲಿಮ್ ಮಹಿಳೆಯರ ಧಾರ್ಮಿಕ ವಸ್ತ್ರ ಬುರ್ಖಾ ಧರಿಸಿ ಅಸಭ್ಯ ನೃತ್ಯ!
ಬೊಮ್ಮಾಯಿಯವರೇ ನೆನಪಿರಲಿ, ಮಸಿ ಬಳಿದದ್ದು ರಾಜ್ಯ ಸರ್ಕಾರದ ಮುಖಕ್ಕೆ: ಸಿದ್ದರಾಮಯ್ಯ ಕಿಡಿ