ಉದ್ಯೋಗ ನೀಡುವ ಬದಲು, ಬಿಜೆಪಿ ಹಿಂದೂ ರಾಷ್ಟ್ರದ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುತ್ತಿದೆ | ಕುಮಾರಸ್ವಾಮಿ - Mahanayaka
2:52 PM Thursday 11 - September 2025

ಉದ್ಯೋಗ ನೀಡುವ ಬದಲು, ಬಿಜೆಪಿ ಹಿಂದೂ ರಾಷ್ಟ್ರದ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುತ್ತಿದೆ | ಕುಮಾರಸ್ವಾಮಿ

kumaraswamy
30/09/2021

ಬೆಂಗಳೂರು: ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿತ್ತು, ಆದರೆ ನಿರುದ್ಯೋಗದ ದೊಡ್ಡ ಬಿಕ್ಕಟ್ಟನ್ನು ಸೃಷ್ಟಿಸಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ  ಹೇಳಿದ್ದು, ಬಿಜೆಪಿಯು ಹಿಂದುತ್ವ ಮತ್ತು ಹಿಂದೂ ರಾಷ್ಟ್ರದ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.


Provided by

ಸರ್ಕಾರಿ ಕೆಲಸಗಳಿಗೆ ನೇಮಕಾತಿಗಳು ನಡೆಯುತ್ತಿಲ್ಲ ಮತ್ತು ಕೋವಿಡ್ ನಿಂದಾಗಿ ಅನೇಕರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಹಿಂದೂ ರಾಷ್ಟ್ರ ನಿರ್ಮಾಣ ಬಿಜೆಪಿಯ ಮುಖ್ಯ ಪ್ರಚಾರವಾಗಿದೆ. ಅವರು ಹಿಂದುತ್ವದ ಹೆಸರಿನಲ್ಲಿ ದೇಶದ ಯುವಕರನ್ನು ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದರು.

ಇಂದು ದೇಶದ ಮತ್ತು ರಾಜ್ಯದ ಯುವಕರಿಗೆ ಬೇಕಾಗಿರುವುದು ಉದ್ಯೋಗ, ಒಬ್ಬರ ಕುಟುಂಬ ಮತ್ತು ಅವಲಂಬಿತರನ್ನು ಬೆಂಬಲಿಸುವ ಶಕ್ತಿ ಉದ್ಯೋಗಕ್ಕೆ ಮಾತ್ರವೇ ಇರುವುದು. ಹೀಗಾಗಿ ಯುವಕರಿಗೆ ಉದ್ಯೋಗ ಸೃಷ್ಟಿ ಮತ್ತು ಉದ್ಯೋಗ ನೀಡುವತ್ತ ಗಮನ ಹರಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.

ತಮ್ಮ ನೇತೃತ್ವದ 14 ತಿಂಗಳ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ಒಂಬತ್ತು ಜಿಲ್ಲೆಗಳಲ್ಲಿ ಕೈಗಾರಿಕಾ ಸಮೂಹಗಳನ್ನು ಸ್ಥಾಪಿಸುವ ನಿರ್ಧಾರವನ್ನು ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ನೆಹರೂ ಒಪ್ಪಿದ್ದ ಆರೆಸ್ಸೆಸ್ ನ್ನು  ಕಾಂಗ್ರೆಸ್ ಒಪ್ಪಿಕೊಳ್ಳಲಿ | ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

ತಮ್ಮ ಮುಂದಿನ ನಡೆ ಏನು ಎಂದು ಸ್ಪಷ್ಟಪಡಿಸಿದ ಪಂಜಾಬ್ ನ ಮಾಜಿ ಸಿಎಂ ಅಮರೀಂದರ್ ಸಿಂಗ್!

ಸುಳ್ಯ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯಿಂದ ಅಂಬೇಡ್ಕರ್ ಅವರ ಜೀವನ ಕುರಿತ ಹಾಡು ಬಿಡುಗಡೆ

ಮಂಗಳೂರು: ನಿಮ್ಮ ವಾಹನದ ವಿಮೆ ಅವಧಿ ಮುಗಿದಿದ್ದರೆ 4 ಸಾವಿರದವರೆಗೆ ದಂಡ ಖಚಿತ

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ “ನೈಟ್ ಪೊಲಿಟಿಕ್ಸ್” ಚೆನ್ನಾಗಿ ಗೊತ್ತು | ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆ

ಕಣ್ಣ ಮುಂದೆಯೇ ಬಾಲಕನಿಗೆ ವಿದ್ಯುತ್ ಶಾಕ್ ಹೊಡೆದರೂ ರಕ್ಷಿಸಲು ಸಾಧ್ಯವಾಗಲಿಲ್ಲ!

ಬಿಜೆಪಿಯ ಜನದರ್ಶನ ಯಾತ್ರೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸುತ್ತಾ ವೇದಿಕೆಯಿಂದ ಕೆಳಗೆ ಬಿದ್ದ ಬಿಜೆಪಿ ನಾಯಕ | ವಿಡಿಯೋ ವೈರಲ್

ಇತ್ತೀಚಿನ ಸುದ್ದಿ