ಸ್ನೇಹಿತನೊಂದಿಗೆ ಹೊಟೇಲ್‍ನಲ್ಲಿ ತಂಗಿದ್ದ ಯುವತಿ ನಿಗೂಢ ಸಾವು - Mahanayaka
3:22 AM Thursday 19 - September 2024

ಸ್ನೇಹಿತನೊಂದಿಗೆ ಹೊಟೇಲ್‍ನಲ್ಲಿ ತಂಗಿದ್ದ ಯುವತಿ ನಿಗೂಢ ಸಾವು

tiruvananthapuram
06/03/2022

ತಿರುವನಂತಪುರಂ: ವಿವಾಹಿತ ಸ್ನೇಹಿತನೊಂದಿಗೆ ಹೊಟೇಲ್‍ ನಲ್ಲಿ ತಂಗಿದ್ದ ಯುವತಿ ನಿಗೂಢ ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ.

ಕಟ್ಟಕ್ಕಡ ಸಮೀಪದ ವೀರನಕಾವು ನಿವಾಸಿ ಗಾಯತ್ರಿ 23 ನಿಗೂಢವಾಗಿ ಮೃತಪಟ್ಟ ಯುವತಿಯಾಗಿದ್ದಾಳೆ. ಈಕೆ ಪರವೂರು ಮೂಲದ ಪ್ರವೀಣ್ ಜೊತೆ ತಂಪನೂರಿನಲ್ಲಿರುವ ಹೊಟೇಲ್‍ನಲ್ಲಿ ತಂಗಿದ್ದಳು. ಶನಿವಾರ ತಡರಾತ್ರಿ ಹೊಟೇಲ್‍ ರೂಮ್‍ನಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾಳೆ. ಆಕೆಯ ಜೊತೆಗಿದ್ದ ಪ್ರವೀಣ್ ನಾಪತ್ತೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶನಿವಾರ ಮಧ್ಯಾಹ್ನ ಇಬ್ಬರೂ ಹೊಟೇಲ್‍ನಲ್ಲಿ ರೂಂ ಮಾಡಿಕೊಂಡಿದ್ದರು. ಹೊಟೇಲ್ ಸಿಬ್ಬಂದಿಗೆ ಪ್ರವೀಣ್‍ ನಿಂದ ಕರೆ ಬಂದಿದ್ದು, ಮಧ್ಯರಾತ್ರಿಯ ವೇಳೆಗೆ ತನ್ನ ಗೆಳತಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.


Provided by

ಹೋಟೆಲ್ ಸಿಬ್ಬಂದಿ ತಕ್ಷಣ ಕೊಠಡಿಯನ್ನು ಪರಿಶೀಲಿಸಿದಾಗ ಬಾಯಿಂದ ನೊರೆ ಬಂದು ಮಹಿಳೆ ಸಾವನ್ನಪ್ಪಿರುವುದು ಕಂಡು ಬಂದಿದೆ. ಅಷ್ಟರಲ್ಲಿ ಆ ವ್ಯಕ್ತಿ ಹೊಟೇಲ್‌ನಿಂದ ನಾಪತ್ತೆಯಾಗಿದ್ದಾರೆ. ಇವರಿಬ್ಬರು ನಗರದ ಆಭರಣ ಮಳಿಗೆಯೊಂದರಲ್ಲಿ ಉದ್ಯೋಗಿಗಳಾಗಿದ್ದರು ಎಂದು ಮೂಲಗಳು ತಿಳಿಸಿವೆ.

ವಿವಾಹಿತನಾಗಿರುವ ಪ್ರವೀಣ್, ಗಾಯತ್ರಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಪ್ರವೀಣ್ ಕುಟುಂಬದಲ್ಲಿ ಗಲಾಟೆಯಾಗಿತ್ತು. ಇದರಿಂದ ಮನನೊಂದು ಗಾಯತ್ರಿ ವಿಷ ಸೇವಿಸಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ನಾಳೆ, ನಾಡಿದ್ದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಮಹಿಳೆಯರಿಗೆ ವಾಟ್ಸಾಪ್‌ ನಲ್ಲಿ ಅಶ್ಲೀಲ ಸಂದೇಶ ಕಳಿಸಿ ಪೊಲೀಸರಿಗೆ ಸವಾಲು ಹಾಕಿದಾತನ ಅರೆಸ್ಟ್

ಉಕ್ರೇನ್‌ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಸ್ವಾಗತಿಸಿದ ಸಿಎಂ ಬೊಮ್ಮಾಯಿ

ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸಿದ್ದು ಮೋದಿಜಿ | ಸಚಿವ ಹಾಲಪ್ಪ

ಹರ್ಷ ಕೊಲೆ ಪ್ರಕರಣ: ಎನ್‌ ಐಎಗೆ ಹಸ್ತಾಂತರಗೊಳ್ಳುವ ನಿರೀಕ್ಷೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ