ಕಂತ್ರಿ ನಾಯಿಗಳು ನೀವು, ಹೊಟ್ಟೆಗೆ ಏನ್ ತಿಂತೀರಾ? | ಉಗ್ರಪ್ಪಗೆ ಉಗ್ರರೂಪ ತೋರಿಸಿದ ಕಾಂಗ್ರೆಸ್ ಕಾರ್ಯಕರ್ತೆ - Mahanayaka
7:34 AM Thursday 19 - September 2024

ಕಂತ್ರಿ ನಾಯಿಗಳು ನೀವು, ಹೊಟ್ಟೆಗೆ ಏನ್ ತಿಂತೀರಾ? | ಉಗ್ರಪ್ಪಗೆ ಉಗ್ರರೂಪ ತೋರಿಸಿದ ಕಾಂಗ್ರೆಸ್ ಕಾರ್ಯಕರ್ತೆ

ugrappa manjula nagaraj
14/10/2021

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದು ಹೇಳಿದ್ದ ಸಲೀಂ ಹಾಗೂ ಉಗ್ರಪ್ಪ  ವಿರುದ್ಧ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು  ಉಗ್ರಪ್ಪ ಅವರಿಗೆ ಹಿಗ್ಗಾಮುಗ್ಗಾ ಬೈದಿದ್ದು,  ನೀವು ಹೊಟ್ಟೆಗೆ ಏನ್ ತಿಂತೀರಾ? ಎಂದು ಪ್ರಶ್ನಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಪತ್ರಿಕಾಗೋಷ್ಠಿಗೂ ಮೊದಲು ಸಲೀಂ ಹಾಗೂ ಉಗ್ರಪ್ಪ ಪರಸ್ಪರ ಗುಟ್ಟಾಗಿ ಮಾತನಾಡಿದ ಬಗ್ಗೆ ವರದಿ ಪ್ರಸಾರವಾದ ಬೆನ್ನಲ್ಲೇ  ಮಂಜುಳಾ ನಾಗರಾಜ್ ಎಂಬ ಕಾರ್ಯಕರ್ತೆ ಆಕ್ರೋಶಗೊಂಡು  ಉಗ್ರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಯಾಕೆ ಸರ್ ನಿಮಗೆ ಡಿ.ಕೆ.ಶಿವಕುಮಾರ್ ಅವರು ಸಹಾಯನೇ ಮಾಡಿಲ್ವ?  ನೀವೆಲ್ಲ ಕಂತ್ರಿ ನಾಯಿಗಳು. ನೀವು ಹೊಟ್ಟೆಗೆ ಅನ್ನ ತಿಂತೀರಾ ಅಲ್ಲ ಬೇರೆನಾದರು ತಿಂತೀರಾ? ಅನ್ನ ತಿಂದ ಮನೆಗೆ ಕನ್ನ ಹಾಕುವ ಕಂತ್ರಿಗಳು ಎಂದು ಹೀನಾಮಾನವಾಗಿ ಬೈದಿದ್ದಾರೆ.


Provided by

ಇಂತಹವರೆಲ್ಲ ಕಾಂಗ್ರೆಸ್ ಪಕ್ಷದಲ್ಲಿ ಇರಲು ಸಾಧ್ಯವಿಲ್ಲ. ಬುದ್ಧಿ ಇಲ್ಲದ ಇವರೆಲ್ಲರೂ ಕೂಡ ಮನಸ್ಸಲ್ಲಿ ಒಂದು ಹೊರಗಡೆ ಒಂದು ಇಟ್ಟುಕೊಂಡಿದ್ದಾರೆ. ನಾನು 19 ವರ್ಷ ವಯಸ್ಸಿದ್ದಾಗ ಕಾಂಗ್ರೆಸ್ ಪಕ್ಷಕ್ಕೆ ಬಂದವಳು. ನಾನು ಕಾಂಗ್ರೆಸ್‍ನ ಅನ್ನ ತಿಂದಿದ್ದೇನೆ ಇವರಂತಲ್ಲ  ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

 ಇನ್ನಷ್ಟು ಸುದ್ದಿಗಳು…

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ಎಂಬ ಫೋಟೋ ವೈರಲ್: ದೂರು ದಾಖಲು

ದಸರ ಮುಗಿದ ತಕ್ಷಣ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ: ಶಿಕ್ಷಕರಿಗೆ ಸರ್ಕಾರ ನೀಡಿದ ಆದೇಶ ಏನು?

ಅನೈತಿಕ ಪೊಲೀಸ್ ಗಿರಿಯ ಸಮರ್ಥನೆ: ಸಿಎಂ ಹೇಳಿಕೆ ಕಾನೂನು ಸುವ್ಯವಸ್ಥೆಯನ್ನು ಗಂಡಾಂತರಕ್ಕೆ ತಳ್ಳಲಿದೆ | SDPI

ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದವರು ಸಾಕ್ಷ್ಯ ನೀಡಿದ್ದಾರೆ | ನಳಿನ್ ಕುಮಾರ್ ಕಟೀಲ್

ನೈತಿಕತೆ ಇಲ್ಲದಾಗ ಆಕ್ಷನ್ಸ್, ರಿಯಾಕ್ಷನ್ಸ್ ಆಗುತ್ತೆ | ಅನೈತಿಕ ಪೊಲೀಸ್ ಗಿರಿ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

“ಸಾವರ್ಕರ್ ರಾಷ್ಟ್ರಪಿತ” ಎಂದು ಬಿಜೆಪಿ ಶೀಘ್ರದಲ್ಲೇ ಘೋಷಿಸುತ್ತದೆ: ಓವೈಸಿ ಹೇಳಿಕೆ

ಕಲೆಕ್ಷನ್ ಪಾರ್ಟಿ: ಸಲೀಂ-ಉಗ್ರಪ್ಪ ಆರೋಪಕ್ಕೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಏನು ಗೊತ್ತಾ?

ಇತ್ತೀಚಿನ ಸುದ್ದಿ