ನನ್ನನ್ನು ಅತ್ಯಾಚಾರ ಮಾಡಲಾಗಿದೆ: ದೂರು ನೀಡಲು ಪೊಲೀಸ್ ಠಾಣೆಗೆ ಹೋದ ಬಾಲಕಿಗೆ ಲೈಂಗಿಕ ದೌರ್ಜನ್ಯ - Mahanayaka

ನನ್ನನ್ನು ಅತ್ಯಾಚಾರ ಮಾಡಲಾಗಿದೆ: ದೂರು ನೀಡಲು ಪೊಲೀಸ್ ಠಾಣೆಗೆ ಹೋದ ಬಾಲಕಿಗೆ ಲೈಂಗಿಕ ದೌರ್ಜನ್ಯ

25/02/2025

ಅತ್ಯಾಚಾರಕ್ಕೊಳಗಾಗಿ ದೂರು ನೀಡಲು ಪೊಲೀಸ್ ಠಾಣೆಗೆ ಹೋದ ಬಾಲಕಿಗೆ ಸಹಾಯ ಮಾಡುವ ಸೋಗಿನಲ್ಲಿ ಅತ್ಯಾಚಾರವೆಸಗಲಾಗಿದೆ. ಇದು ಬಿಹಾರದಲ್ಲೋ, ಉತ್ತರ ಪ್ರದೇಶದಲ್ಲೊ ನಡೆದದ್ದಲ್ಲ. ರಾಜ್ಯದ ರಾಜಧಾನಿ ಬೆಂಗಳೂರಲ್ಲಿ. 17 ವರ್ಷದ ಸಂತ್ರಸ್ತೆಯ ತಾಯಿ ನೀಡಿದ ದೂರು ಆಧರಿಸಿ ಬೊಮ್ಮನಹಳ್ಳಿ ಠಾಣೆ ಕಾನ್‌ಸ್ಟೇಬಲ್ ಅರುಣ್ ತೊಣೆಪ ಹಾಗೂ ಸಂತ್ರಸ್ತೆಯ ಸ್ನೇಹಿತನನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಂತ್ರಸ್ತೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದರು. ಈಕೆಗೆ ಪಕ್ಕದ ಮನೆಯ ವಿವಾಹಿತ ವ್ಯಕ್ತಿಯ ಪರಿಚಯವಾಗಿತ್ತು. ಆ ವ್ಯಕ್ತಿ ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ, ಬಾಲಕಿಯ ಮೇಲೆ ನಿರಂತರ ಅತ್ಯಾಚಾರವೆಸಗಿ ಹಲ್ಲೆ ಮಾಡಿದ್ದಾರೆ. ಈ ವಿಷಯವನ್ನು ಬಾಲಕಿ ತನ್ನ ತಾಯಿಗೆ ತಿಳಿಸಿದ್ದರು.

ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಬಾಲಕಿ ಪೊಲೀಸ್ ಠಾಣೆಗೆ ತೆರಳಿದ್ದಾಗ, ಆಕೆಯನ್ನು ಪರಿಚಯಿಸಿಕೊಂಡ ಪೊಲೀಸ್ ಕಾನ್‌ಸ್ಟೇಬಲ್ ಅರುಣ್, ನ್ಯಾಯ ಕೊಡಿಸುವ ಭರವಸೆಯ ಜೊತೆಗೆ ಕೆಲಸ ಕೊಡಿಸುವುದಾಗಿ ನಂಬಿಸಿದ್ದರು. ಕಳೆದ ಡಿಸೆಂಬರ್‌ನಲ್ಲಿ ಬಿಟಿಎಂ ಲೇಔಟ್‌ನ ಹೋಟೆಲ್ ಒಂದರ ಕೊಠಡಿಗೆ ಬಾಲಕಿಯನ್ನು ಕರೆಸಿಕೊಂಡ ಕಾನ್‌ಸ್ಟೇಬಲ್, ಮದ್ಯದಲ್ಲಿ ಅಮಲು ಬರುವ ಔಷಧಿ ಬೆರೆಸಿ ಕುಡಿಸಿ, ಅತ್ಯಾಚಾರವೆಸಗಿದ್ದಾರೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ತನ್ನ ಬಳಿ ಇರುವ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ವರದಿಗಳು ಹೇಳಿವೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ