ಆಭರಣ ಜ್ಯುವೆಲ್ಲರ್ ಜ್ಯುವೆಲ್ಲರ್ಸ್ ಮಳಿಗೆಗಳ ಮೇಲೆ ಐಟಿ ದಾಳಿ
![abharana](https://www.mahanayaka.in/wp-content/uploads/2023/10/abharana.jpg)
31/10/2023
ಉಡುಪಿ: ಚಿನ್ನಾಭರಣಗಳ ಮಳಿಗೆ ಆಭರಣ ಜ್ಯುವೆಲ್ಲರ್ ಇದರ ಉಡುಪಿ, ಮಂಗಳೂರು ಸೇರಿದಂತೆ ವಿವಿಧ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ಇಂದು ಬೆಳಗಿನ ಜಾವ ದಾಳಿ ನಡೆಸಿದ್ದಾರೆ.
ಉಡುಪಿ ನಗರದಲ್ಲಿರುವ ಪ್ರಮುಖ ಮಳಿಗೆ, ಅಲ್ಲೇ ಸಮೀಪ ಇರುವ ಆಭರಣ ತಯಾರಿಕಾ ಘಟಕ, ಬ್ರಹ್ಮಾವರ, ಮಂಗಳೂರು ಸೇರಿದಂತೆ ವಿವಿಧ ಮಳಿಗೆಗಳಿಗೆ ಏಕಕಾಲದಲ್ಲಿ ತಂಡ ದಾಳಿ ನಡೆಸಿರುವುದು ತಿಳಿದುಬಂದಿದೆ. ಅದೇ ರೀತಿ ಉಡುಪಿ ನಗರದಲ್ಲಿರುವ ಆಭರಣ ತಯಾರಿಕಾ ಘಟಕದಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ.