ಜೆಡಿಎಸ್ ನ್ನು ಸಿದ್ದರಾಮಯ್ಯ ಮಾತ್ರವಲ್ಲ, ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ | ಹೆಚ್.ಡಿ.ದೇವೇಗೌಡ ಗುಡುಗು - Mahanayaka
11:10 PM Thursday 13 - August 2026

ಜೆಡಿಎಸ್ ನ್ನು ಸಿದ್ದರಾಮಯ್ಯ ಮಾತ್ರವಲ್ಲ, ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ | ಹೆಚ್.ಡಿ.ದೇವೇಗೌಡ ಗುಡುಗು

siddaramaiha vs devegowda
27/09/2021

ರಾಮನಗರ: ಜೆಡಿಎಸ್ ನ್ನು ಸಿದ್ದರಾಮಯ್ಯ ಮಾತ್ರವಲ್ಲ ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಗುಡುಗಿದ್ದು, ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ? ಎಂದು ಅವರು ಪ್ರಶ್ನಿಸಿದ್ದಾರೆ

ಬಿಡದಿ ಫಾರ್ಮ್ ಹೌಸ್ ನಲ್ಲಿ ಆರಂಭವಾಗಿರುವ 4 ದಿನಗಳ ಜನತಾ ಪರ್ವ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ತಾವು ನಾಯಕರಾಗಿ ಬಂದಿದ್ದು ಎಲ್ಲಿಂದ, ಬೆಳೆದದ್ದು ಎಲ್ಲಿ? ಎಂಬುದನ್ನು ಅರಿತು ಮಾತನಾಡಬೇಕು. ಜೆಡಿಎಸ್ ಅವರ ಜತೆ ಇವರ ಜತೆ ಹೋಗುವ ಪಕ್ಷ ಎಂದು ದೂರುವ ಮುನ್ನ ಸಮ್ಮಿಶ್ರ ಸರಕಾರ ರಚನೆ ಮಾಡುವುದಕ್ಕೆ ಯಾರು ನಮ್ಮ ಮನೆ ಬಾಗಿಲಿಗೆ ಬಂದರು ಎನ್ನುವುದು ನನಗೆ, ನಿಮಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ-ದೇಶಕ್ಕೆ ಗೊತ್ತಿದೆ ಎಂದು ಅವರು ಹೇಳಿದರು.

ನಾನು ಅಪಮಾನಗಳನ್ನು ಸಹಿಸಿದ್ದೇನೆ, ಎದುರಿಸಿದ್ದೇನೆ. ಅಪಾರ ಕಾರ್ಯಕರ್ತರ ಜತೆ ಅಂತ ಎಲ್ಲ ನೋವುಗಳನ್ನು ನುಂಗಿದ್ದೇನೆ ಎಂದ ದೇವೇಗೌಡರು, ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023 ರಲ್ಲಿ ಉತ್ತರ ನೀಡೋಣ ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ನಿಧಿಗಾಗಿ ತನ್ನ ಪತ್ನಿಯನ್ನೇ ನರಬಲಿ ನೀಡಲು ಮುಂದಾದ ಪತಿ!

ಬೆಂಗಳೂರಿನ ಪ್ಲೈಓವರ್ ಮೇಲೆ ಮತ್ತೊಂದು ಭೀಕರ ಅಪಘಾತ | ಯುವಕ, ಯುವತಿಯ ದಾರುಣ ಸಾವು

ಶಾಕಿಂಗ್ ನ್ಯೂಸ್: ಏಕಾಏಕಿ ಕುಸಿದು ಬಿದ್ದ ಮೂರು ಅಂತಸ್ತಿನ ಬೃಹತ್ ಕಟ್ಟಡ

ಬಿಜೆಪಿಯ ಅಧಿಕಾರವಧಿಯಲ್ಲಿ ಹಿಂದುತ್ವ ಅಪಾಯದ ಸ್ಥಿತಿಯಲ್ಲಿದೆ | ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೋಳಿ

ತನ್ನ ಸಹೋದ್ಯೋಗಿ ಮಹಿಳೆಯ ಮೇಲೆಯೇ ಅತ್ಯಾಚಾರ ನಡೆಸಿದ ವಾಯುಪಡೆಯ ಅಧಿಕಾರಿ!

ದೇಶಾದ್ಯಂತ ಬುಗಿಲೆದ್ದ ರೈತರ ಆಕ್ರೋಶ: ವಿವಿಧ ಹೆದ್ದಾರಿ ತಡೆದು ತೀವ್ರ ಪ್ರತಿಭಟನೆ

ಗೋಡೆ ಮೈಮೇಲೆ ಕುಸಿದು ಬಿದ್ದರೂ ತನ್ನ ಮಗುವಿನ ಮೈಗೆ ಸಣ್ಣ ಗೆರೆಯೂ ಬೀಳದಂತೆ ಕಾಪಾಡಿದ ತಾಯಿ | ವೈರಲ್ ವಿಡಿಯೋ

ಇತ್ತೀಚಿನ ಸುದ್ದಿ