ಪತ್ರಕರ್ತ, ಆ್ಯಂಕರ್, ಕವಿ ಶಂಶೀರ್ ಬುಡೋಳಿಗೆ 'ಕಾವ್ಯ ಸಿರಿ ಪ್ರಶಸ್ತಿ' ಪ್ರದಾನ - Mahanayaka
4:36 PM Saturday 21 - September 2024

ಪತ್ರಕರ್ತ, ಆ್ಯಂಕರ್, ಕವಿ ಶಂಶೀರ್ ಬುಡೋಳಿಗೆ ‘ಕಾವ್ಯ ಸಿರಿ ಪ್ರಶಸ್ತಿ’ ಪ್ರದಾನ

samshri
31/07/2023

ಪತ್ರಕರ್ತ, ಕವಿ, ಲೇಖಕ, ಆ್ಯಂಕರ್ ಶಂಶೀರ್ ಬುಡೋಳಿ ಅವರಿಗೆ ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ವತಿಯಿಂದ ‘ಕಾವ್ಯ ಸಿರಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಮಂಗಳೂರು ನಗರದ ಜೆಪ್ಪು ಸೈಂಟ್ ಜೋಸೆಫ್ ಚರ್ಚ್ ನ ಮರಿಯಾ ಜಯಂತಿ ಸಭಾಂಗಣದಲ್ಲಿ ರವಿವಾರ ನಡೆದ ಭಾವೈಕ್ಯ ಸಮ್ಮಿಲನ, ಕವಿಗೋಷ್ಟಿ, ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಶಂಶೀರ್ ಬುಡೋಳಿ ಅವರು ಸಾಹಿತ್ಯ, ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇತ್ತೀಚಿಗೆ ಮೂಲ್ಕಿಯ ಪುನರೂರಲ್ಲಿ ನಡೆದ 13 ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಇವರು ‘ಕರ್ನಾಟಕ ಯುವ ರತ್ನ’ ಪ್ರಶಸ್ತಿಯನ್ನು ಪಡೆದಿದ್ದರು.

ಪರಿಚಯ:

ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದಾಗಲೇ ಪತ್ರಿಕೆಗಳಿಗೆ ಬರೆಯುತ್ತಿದ್ದ ಇವರ ಅನೇಕ ಲೇಖನ, ಕವನ, ಲಘುಬರಹಗಳು ಕನ್ನಡದ ಎಲ್ಲಾ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. 2009 ರಲ್ಲಿ ನಡೆದ 11 ನೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅಲ್ಲದೇ ರಾಜ್ಯ ಸರ್ಕಾರದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಕ್ರಿಯಾಶೀಲವಾಗಿ ಗುರುತಿಸಿಕೊಂಡಿದ್ದಾರೆ. ‘ಪಿರ್ಸತ್ತೊ ಪಲಕ’ ಎಂಬ ಬ್ಯಾರಿ ಭಾಷೆಯಲ್ಲಿ ಚೊಚ್ಚಲ ಕವನ ಸಂಕಲನ ಕೂಡಾ ಪ್ರಕಟಗೊಂಡಿವೆ. ಅಲ್ಲದೇ ಕನ್ನಡದಲ್ಲಿ ‘ಆಕಾಶ-ತಾಯಿ’, ‘ವನಸುಮಗಳು’, ‘ಮುಗಿಲ ಮಾಲೆ’, ‘ನೇತ್ರಾವತಿ’ ಕನ್ನಡ ಕವನ ಸಂಕಲನದಲ್ಲಿ ಇವರ ಕವನ ಪ್ರಕಟಗೊಂಡಿವೆ. ಬ್ಯಾರಿ ಕಾವ್ಯ ಸಂಪುಟದಲ್ಲೂ ಇವರ ಕವನ ಪ್ರಕಟಗೊಂಡಿವೆ. ಪದವಿ ವಿದ್ಯಾರ್ಥಿಯಾಗಿದ್ದಾಗಲೇ ಇವರು ‘ರೋಲ್ ಆಫ್ ಯುವವಾಣಿ ಇನ್ ರೂರಲ್ ಏರಿಯಾ’ ಮತ್ತು ‘ಡಾ.ಹಾ.ಮಾ.ನಾಯಕ್ – ಬದುಕು ಬರಹ ಮತ್ತು ಪುಸ್ತಕ ಪ್ರೀತಿ’ ಹೀಗೆ ವಿವಿಧ ವಿಷಯದಡಿಯಲ್ಲಿ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಕಿರು ಸಂಶೋಧನೆ ಮಾಡಿದ್ದರು. ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ ಪದವಿ, ಮೈಸೂರು ಮುಕ್ತ ವಿವಿಯಲ್ಲಿ ಡಿಪ್ಲೊಮಾ ಇನ್ ಜರ್ನಲಿಸಂ ಹಾಗೂ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂಸಿಜೆ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಸದ್ಯ ಮೈಸೂರಿನಲ್ಲಿ ಪಿಎಚ್ ಡಿ ಸಂಶೋಧನೆ ಮಾಡುತ್ತಿದ್ದಾರೆ. ಮಂಗಳೂರಿನ ಯೆನೆಪೋಯ ವಿವಿ ಬೋರ್ಡ್ ಆಫ್ ಸ್ಟಡೀಸ್ ನ ಸದಸ್ಯರಾಗಿದ್ದಾರೆ. ಸಮಾಜ ಸೇವೆಯ ದೃಷ್ಟಿಯಿಂದ ‘ಶಂಶೀರ್ ಬುಡೋಳಿ ಫೌಂಡೇಶನ್’ ಕೂಡಾ ಸ್ಥಾಪಿಸಿದ್ದಾರೆ.


Provided by

ಸದ್ಯ ಝೀ ಕನ್ನಡ ನ್ಯೂಸ್ ಚಾನೆಲ್ ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರರಾಗಿರುವ ಇವರು ರಾಜ್ ನ್ಯೂಸ್, ಪಬ್ಲಿಕ್ ಟಿವಿ, ಸುವರ್ಣ ನ್ಯೂಸ್, ಟಿವಿ9, ಸುದ್ದಿ ಟಿವಿ ಹಾಗೂ ವಾರ್ತಾಭಾರತಿ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು. ‘ಮಹಾನಾಯಕ’ ದ ವರದಿಗಾರರಾಗಿದ್ದಾರೆ. ಸನ್ಮಾರ್ಗ ಚಾನೆಲ್ ನ ಆಂಕರ್ ಆಗಿ ಗುರುತಿಸಿಕೊಂಡಿದ್ದಾರೆ. ಅಲ್ಲದೇ ವಿವಿಧ ಸಾಮಾಜಿಕ ಸುದ್ದಿ ಜಾಲತಾಣಗಳಲ್ಲಿ ವಾಯ್ಸ್ ಓವರ್ ಆರ್ಟಿಸ್ಟ್ ಆಗಿ ಗುರುತಿಸಿಕೊಂಡಿದ್ದಾರೆ.

ರಾಷ್ಟ್ರ ಮಟ್ಟದ ವಿಚಾರ ಸಂಕಿರಣ, ಕವಿಗೋಷ್ಟಿಗಳಲ್ಲಿ ಕವನ ವಾಚಿಸಿರುವ ಇವರನ್ನು ಅನೇಕ ಕಡೆ ಸನ್ಮಾನಿಸಲಾಗಿದೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬುಡೋಳಿ ನಿವಾಸಿ ಧರ್ಮಗುರು ಇಬ್ರಾಹಿಂ ಫಾಝಿಲ್ ಹನೀಫಿ ಹಾಗೂ ಕೈರುನ್ನೀಸಾ ದಂಪತಿಯ ಪುತ್ರರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ