ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಜೆ.ಪಿ.ನಡ್ಡಾ ಕಿಡಿ: ಯುಪಿಎ ಎಂದರೆ 'ದಬ್ಬಾಳಿಕೆ, ಪಕ್ಷಪಾತ, ದೌರ್ಜನ್ಯ' ಎಂದರ್ಥ ಎಂದ ಬಿಜೆಪಿ ರಾಷ್ಟ್ರಾಧ್ಯಕ್ಷ - Mahanayaka
5:24 AM Thursday 19 - September 2024

ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಜೆ.ಪಿ.ನಡ್ಡಾ ಕಿಡಿ: ಯುಪಿಎ ಎಂದರೆ ‘ದಬ್ಬಾಳಿಕೆ, ಪಕ್ಷಪಾತ, ದೌರ್ಜನ್ಯ’ ಎಂದರ್ಥ ಎಂದ ಬಿಜೆಪಿ ರಾಷ್ಟ್ರಾಧ್ಯಕ್ಷ

16/07/2023

ಕಾಂಗ್ರೆಸ್ ನ ಯುಪಿಎ ದಬ್ಬಾಳಿಕೆ, ಪಕ್ಷಪಾತ ಮತ್ತು ದೌರ್ಜನ್ಯಗಳನ್ನು ಪ್ರತಿನಿಧಿಸುತ್ತದೆ. ಹಾಗೂ ರಾಜಸ್ಥಾನದಲ್ಲಿ ಒಂದು ನಿಮಿಷವೂ ಅಧಿಕಾರದಲ್ಲಿರಲು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹಕ್ಕಿಲ್ಲ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಆರೋಪಿಸಿದ್ದಾರೆ.

ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ “ನಹೀ ಸಹೇಗಾ ರಾಜಸ್ಥಾನ” ಅಭಿಯಾನಕ್ಕೆ ಚಾಲನೆ ನೀಡಿದ ನಂತರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ಅಶೋಕ್ ಗೆಹ್ಲೋಟ್ ಸರ್ಕಾರವು ಭ್ರಷ್ಟಾಚಾರದ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಅನ್ನು ಗುರಿಯಾಗಿಸಿಕೊಂಡು ಮಾತನಾಡಿದ ಅವರು, “ಕಾಂಗ್ರೆಸ್ ನ ಯುಪಿಎ ಎಂದರೆ ‘ಉತ್ಪಿದಾನ್, ಪಕ್ಷಪತ್ ಮತ್ತು ಅತ್ಯಾಚಾರ್ ಎಂದರ್ಥ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್’ ಮಂತ್ರದೊಂದಿಗೆ ಕಾರ್ಯನಿರ್ವಹಿಸುತ್ತಿದೆ” ಎಂದು ಅವರು ಹೇಳಿದರು.


Provided by

ಕಾಂಗ್ರೆಸ್ ಅನ್ನು ಅಧಿಕಾರದಿಂದ ಕಿತ್ತೊಗೆಯಲು ನಡ್ಡಾ ಅವರು ‘ನಹೀ ಸಹೇಗಾ ರಾಜಸ್ಥಾನ’ ಎಂಬ ಪಕ್ಷದ ಚುನಾವಣಾ ಅಭಿಯಾನವನ್ನು ಪ್ರಾರಂಭಿಸಿದರು. ವರ್ಷಾಂತ್ಯದ ವೇಳೆಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ