ಕೌಟುಂಬಿಕ ಕಲಹ: ಇಬ್ಬರು ಯುವಕರ ಬರ್ಬರ ಹತ್ಯೆ - Mahanayaka
1:54 PM Friday 20 - September 2024

ಕೌಟುಂಬಿಕ ಕಲಹ: ಇಬ್ಬರು ಯುವಕರ ಬರ್ಬರ ಹತ್ಯೆ

crime news
20/02/2022

ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು ಇಬ್ಬರು ಯುವಕರು ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಶಿವಮೊಗ್ಗ ಹೊರವಲಯದ ಸೂಳೆಬೈಲು ಶಾಂತಿನಗರ 7 ನೇ ಕ್ರಾಸ್ ನಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಸಲೀಮ್ ಅಹಮದ್(22) ಹಾಗೂ ಅಬ್ದುಲ್ ದಸ್ತಗಿರಿ(23) ಕೊಲೆಯಾದವರು. ಕೌಟುಂಬಿಕ ವೈಷಮ್ಯಕ್ಕೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ಇಬ್ಬರ ನಡುವೆ ಗಲಾಟೆ ಆರಂಭವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಮಾರಕಾಸ್ತ್ರಗಳಿಂದ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ.

ಈ ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

6 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದು ದೊಡ್ಡ ಸುದ್ದಿಯಾಯ್ತು, ಬೆಂಗಳೂರು ನೀಲಿಯಾಗಿದ್ದು ಸುದ್ದಿಯಾಗಲಿಲ್ಲ | ಕವಿರಾಜ್ ಬೇಸರ

ಭಾರತ ಮಾತೆಯ ರಕ್ಷಣೆಗೋಸ್ಕರ ಮನೆಯಲ್ಲಿ ತಲವಾರ್ ಇಟ್ಟುಕೊಳ್ಳಿ: ಪ್ರಮೋದ್ ಮುತಾಲಿಕ್ ಕರೆ

ದಲಿತರು ಮಾಧ್ಯಮಗಳ ಆರಂಭಿಸುವ ಮುನ್ನ ಇದನ್ನೊಮ್ಮೆ ಓದಿ….

ಸಂವಿಧಾನ ಪರ ಸಂಘಟನೆಗಳಿಂದ ಹೊಸ ಮಾಧ್ಯಮ ತರಲು ಗಂಭೀರ ಚಿಂತನೆ!

 

ಇತ್ತೀಚಿನ ಸುದ್ದಿ