ಲಖೀಂಪುರ್ ಖೇರ್ ಸಚಿವನ ಪುತ್ರ ರೈತರನ್ನು ಕೆಣಕಿ, ಗುಂಡು ಹಾರಿಸಿದ್ದ | ಎಫ್ ಐಆರ್ ನಲ್ಲಿ ಉಲ್ಲೇಖ - Mahanayaka
12:54 AM Wednesday 14 - January 2026

ಲಖೀಂಪುರ್ ಖೇರ್ ಸಚಿವನ ಪುತ್ರ ರೈತರನ್ನು ಕೆಣಕಿ, ಗುಂಡು ಹಾರಿಸಿದ್ದ | ಎಫ್ ಐಆರ್ ನಲ್ಲಿ ಉಲ್ಲೇಖ

lakhimpur
06/10/2021

ಲಖೀಂಪುರ್ ಖೇರ್:  ಲಖೀಂಪುರ್ ಖೇರ್ ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ಕೇಂದ್ರ ಸಚಿವರ ಪುತ್ರ ಅಶಿಶ್ ಮಿಶ್ರಾ ಅಲಿಯಾಸ್ ಮೋನು ಪ್ರತಿಭಟನಾನಿರತ ರೈತರನ್ನು ಕೆಣಕಿ, ಅವರ ಮೇಲೆ ಗುಂಡು ಹಾರಿಸಿರುವುದನ್ನು ಉಲ್ಲೇಖಿಸಲಾಗಿದೆ.

ಕಾರಿನಲ್ಲಿ ಕುಳಿತಿದ್ದ ಸಚಿವರ ಪುತ್ರ ಆಶಿಶ್ ಮಿಶ್ರಾ ಪ್ರತಿಭಟನಾಕಾರರನ್ನು ಕೆಣಕ್ಕಿದ್ದಾನೆ. ಇದಲ್ಲದೇ ಅವರ ಮೇಲೆ ಗುಂಡು ಹಾರಿಸಿದ್ದಾನೆ ಎನ್ನುವುದು ಸದ್ಯ ಸ್ಪಷ್ಟವಾಗುತ್ತಿದೆ. ಜೊತೆಗೆ ಬಹ್ರೈಚ್ ಜಿಲ್ಲೆಯವರಾದ ಜಗಜಿತ್ ಸಿಂಗ್ ಅವರು ನೀಡಿರುವ ದೂರಿನಲ್ಲಿ  ಮಂತ್ರಿ ಹಾಗೂ ಆತನ ಪುತ್ರನಿಂದ ನಡೆದ ಪಿತೂರಿಯಿಂದಾಗಿ ರೈತರ ಹತ್ಯೆಗಳು ನಡೆದಿದೆ ಎಂದು ಹೇಳಲಾಗಿದೆ.

ಕೇಂದ್ರ ಗೃಹ ಸಚಿವರ ಪ್ರಚೋದನಕಾರಿ ಹೇಳಿಕೆಗಳು ರೈತರ ಪ್ರತಿಭಟನೆಗೆ ಕಾರಣವಾಗಿ ಹಿಂಸಾಚಾರ ಭುಗಿಲೆದ್ದಿತು ಮತ್ತು ಎಂಟು ಜನರ ಜೀವವನ್ನು ಬಲಿ ತೆಗೆದುಕೊಂಡಿದೆ  ಎಂದು ಆರೋಪಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಗನ ಬರ್ಬರ ಹತ್ಯೆ | ತಾಯಿ ಹಾಗೂ ಆಕೆಯ ಪ್ರಿಯಕರ ಅರೆಸ್ಟ್

ಏಕಾಏಕಿ ಮುರಿದು ಬಿದ್ದ ತೂಗು ಸೇತುವೆ | ನದಿಗೆ ಬಿದ್ದ 30 ವಿದ್ಯಾರ್ಥಿಗಳು

ಸಚಿವ ಸಿ.ಸಿ.ಪಾಟೀಲ್ ಕಾರು ಬೈಕ್ ಗೆ ಡಿಕ್ಕಿ | ಬೈಕ್ ಸವಾರನನ್ನು ಬಿಟ್ಟು ಸಚಿವರನ್ನು ರಕ್ಷಿಸಲು ಪೊಲೀಸರಿಂದ ಯತ್ನ!?

ಹಾನಗಲ್, ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್

ಆರೆಸ್ಸೆಸ್ ದೇಶವನ್ನು ಮನುಸ್ಮೃತಿ ಯುಗಕ್ಕೆ ತೆಗೆದುಕೊಂಡು ಹೋಗುವ ಅಜೆಂಡಾ ಹೊಂದಿದೆ | ಹೆಚ್.ಡಿ.ಕುಮಾರಸ್ವಾಮಿ

ಆಸೆ ಪೂರೈಸು ಎಂದು ಪೀಡಿಸಿದ ವಿವಾಹಿತನ ಕಿರುಕುಳ ತಾಳಲಾರದೇ ದುರಂತ ಸಾವಿಗೀಡಾದ ಬಾಲಕಿ!

‘ಮತಾಂತರ ನಿಷೇಧ ಕಾಯ್ದೆ’ ಜಾರಿಗೆ ಒತ್ತಾಯಿಸಿದ ಪ್ರತಿಭಟನೆಯಲ್ಲಿ ನಾನು ಭಾಗವಹಿಸಿಲ್ಲ: ಡಾ.ಶ್ರೀನಿವಾಸ್ ಸ್ಪಷ್ಟನೆ

ಇತ್ತೀಚಿನ ಸುದ್ದಿ