ಅಮಿತ್ ಶಾ ತಮ್ಮ ಮಗನನ್ನು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ಮಾಡಲಿ – ಕಾಂಗ್ರೆಸ್

congress
04/05/2023

ಬೆಂಗಳೂರು:  ಬಜರಂಗದಳ ಅತ್ಯತ್ತಮ ಸಂಘಟನೆಯಾಗಿದ್ದರೆ, ಅಮಿತ್ ಶಾ ಅವರು ತಮ್ಮ ಮಗನನ್ನು ಬಿಸಿಸಿಐ ಹುದ್ದೆಯಿಂದ ಕಿತ್ತು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ನೇಮಿಸಲಿ ಎಂದು ರಾಜ್ಯ ಕಾಂಗ್ರೆಸ್ ಟ್ವಿಟ್ಟರ್‌ ನಲ್ಲಿ ದಾಳಿ ನಡೆಸಿದೆ.

ಬಸವರಾಜ ಬೊಮ್ಮಾಯಿಯವರು ತಮ್ಮ ಮಗನ ಉದ್ಯಮವನ್ನು ಮುಚ್ಚಿಸಿ ರಾಜ್ಯಾಧ್ಯಕ್ಷನನ್ನಾಗಿ ಮಾಡಲಿ. ಬಿಜೆಪಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಡವರು, ದಲಿತ, ಹಿಂದುಳಿದವರ ಮಕ್ಕಳನ್ನು ಬಳಸಿ ಕೋರ್ಟಿಗೆ ಅಲೆಯುವಂತೆ ಮಾಡುವುದನ್ನು ಬಿಡಲಿ ಎಂದು ಕೆಂಡಕಾರಿದೆ.

ಬಜರಂಗದಳದ ಬಗ್ಗೆ ಬಹಳ ಮಾತನಾಡುವ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸರಣಿ ಪ್ರಶ್ನೆಗಳನ್ನಿಟ್ಟಿದೆ. ಸಿಟಿ ರವಿ ಮಕ್ಕಳು ಬಜರಂಗದಳದ ಯಾವ ಹುದ್ದೆಯಲ್ಲಿದ್ದಾರೆ? ಆರ್ ಅಶೋಕ್ ಮಗ ಬಜರಂಗದಳಲ್ಲಿ ಏನು ಕೆಲಸ ಮಾಡುತ್ತಿದ್ದಾರೆ? ತೇಜಸ್ವಿ ಸೂರ್ಯ ಏಕೆ ಬಜರಂಗದಳ ಸೇರಿಲ್ಲ? ಬೊಮ್ಮಾಯಿ ಮಗ ಬಜರಂಗದಳ ಸೇರಿ ಬೆಂಕಿ ಹಚ್ಚುವುದನ್ನು ಬಿಟ್ಟು ಉದ್ಯಮಿಯಾಗಿದ್ದೇಕೆ?

ಬಜರಂಗದಳ ಬಿಜೆಪಿಯ ಅಂಗ ಸಂಘಟನೆಯೇ? ಇಷ್ಟೊಂದು ಮಮಕಾರ ತೋರುವ ಬಿಜೆಪಿ, ಬಜರಂಗದಳದವರಿಗೆ ಎಷ್ಟು ಟಿಕೆಟ್ ನೀಡಿದೆ? ಹಿರಿಯರ ನಾಯಕತ್ವವನ್ನು ಮುಗಿಸಲು ಅವರ ಮಕ್ಕಳು, ಸೊಸೆಯಂದಿರು, ಪತ್ನಿಯರಿಗೆ ಟಿಕೆಟ್ ನೀಡುವ ಬದಲು ಬಜರಂಗದಳದವರಿಗೆ ಟಿಕೆಟ್ ಏಕೆ ನೀಡಿಲ್ಲ?

ಅಮಾಯಕ ಹುಡುಗರನ್ನು ಕಾನೂನು ವಿರೋಧಿ ಕೃತ್ಯಗಳಿಗೆ ಬಳಸಿ ಲಾಭ ಪಡೆಯುವುದು ಮಾತ್ರ ಬಿಜೆಪಿಯ ಕೆಲಸವೇ? ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುವ ಬಜರಂಗದಳ ಪಿಎಫ್‍ಐ ಸೇರಿದಂತೆ ಯಾವುದೇ ಸಂಘಟನೆಯ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದರೆ ಬಿಜೆಪಿ ಉರಿದು ಬೀಳುತ್ತದೆ. ಆದರೆ ಸಂವಿಧಾನ ಬದಲಿಸುತ್ತೇವೆ ಎಂದವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂಬ ಪ್ರಶ್ನೆಗಳನ್ನು ಕಾಂಗ್ರೆಸ್ ಎತ್ತಿದೆ.

ಬಿಜೆಪಿಗೆ ಸಂವಿಧಾನ ಮುಖ್ಯವೇ, ಸಂವಿಧಾನ ವಿರೋಧಿ ಸಂಘಟನೆಗಳು ಮುಖ್ಯವೇ? ಸ್ಪಷ್ಟಪಡಿಸಿ ಮುಂದಿನ ಮಾತಾಡಲಿ. ಬಜರಂಗದಳ ಬಿಜೆಪಿಯ ಮುದ್ದಿನ ಕೂಸು ಎಂದಾದರೆ, ದಿನೇಶ್ ನಾಯ್ಕ ಎಂಬ ದಲಿತನ ಕೊಲೆಯ ಹೊಣೆಯನ್ನು ಬಿಜೆಪಿ ಹೊರಲಿ. ಮಂಗಳೂರಿನ ಪಬ್ ದಾಳಿಯ ಹೊಣೆಯನ್ನು ಬಿಜೆಪಿ ಹೊರಲಿ. ಸಮಾಜಘಾತುಕ ಕೃತ್ಯಗಳೆಲ್ಲದರ ಹೊಣೆಯನ್ನು ಬಿಜೆಪಿಯೇ ಹೊರಲಿ. ನಂತರ ಬಜರಂಗದಳವನ್ನು ಸಮರ್ಥಿಸಿಕೊಳ್ಳಲಿ ಎಂದು ಹರಿಹಾಯ್ದಿದೆ.

ನಿಜವಾದ ಭಜರಂಗಿಗಳು (ಕ್ರೀಡಾಪಟುಗಳು) ದೆಹಲಿಯ ಜಂತರ್ ಮಂಥರ್‌ನಲ್ಲಿ ತಮಗಾದ ಶೋಷಣೆಯ ನೋವು ತಾಳದೆ ಪ್ರತಿಭಟಿಸುತ್ತಿದ್ದಾರೆ. ಮೋದಿಯವರೇ ಇಲ್ಲಿನ ನಕಲಿ ಭಜರಂಗಿಗಳ ಓಲೈಕೆ ಬಿಟ್ಟು ಅಸಲಿ ಭಜರಂಗಿಗಳ ನೋವು ಆಲಿಸಿ. ಅಲ್ಲೂ “ಬಜರಂಗಿ ಪುನಿಯಾ” ಎಂಬ ಹೆಸರಿನ ಕ್ರೀಡಾಪಟು ನೋವಿನಲ್ಲಿದ್ದಾರೆ. ನಿಮಗೆ ಆ ಅಸಲಿ ಬಜರಂಗಿಗಳ ಹಿತ ಬೇಡವೇ ಎಂದು ಪ್ರಶ್ನಿಸಿ ಸರಣಿ ಟ್ವೀಟ್ ಮಾಡಿ ಕಿಡಿಕಾರಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

 

FacebookTwitterWhatsappInstagramEmailTelegram

ಇತ್ತೀಚಿನ ಸುದ್ದಿ

Exit mobile version