ಕರ್ನಾಟಕಕ್ಕೆ ಕೆಟ್ಟದಾಗದಿರಲಿ: ಕಿವಿ, ಬಾಯಿ, ಕಣ್ಣು ಮುಚ್ಚಿ ಕಾವೇರಿಗಾಗಿ ಪ್ರತಿಭಟನೆ!!

caveri protest chamarajanagara
02/10/2023

ಚಾಮರಾಜನಗರ: ಗಾಂಧಿ ಜಯಂತಿ ಹಿನ್ನೆಲೆ ಮಹಾತ್ಮ ಸಾರಿದ ಸಂದೇಶವನ್ನು ಸಾರಿ ಕಾವೇರಿಗಾಗಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಮೌನ ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಗಾಂಧಿ ಚಿತ್ರ ಹಿಡಿದು ರಸ್ತೆ ತಡೆ ನಡೆಸಿ ಕಿವಿ, ಕಣ್ಣು, ಬಾಯಿಯನ್ನು ಮುಚ್ಚಿಕೊಂಡು ಮೌನ ಪ್ರತಿಭಟನೆ ನಡೆಸಿದರು.

ಅಹಿಂಸೆ ಮೂಲಕ ಮಹಾತ್ಮ ಗಾಂಧಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅದರಂತೆ, ಗಾಂಧಿ ಜಯಂತಿ ದಿನದಂದು ಜೀವನದಿ ಕಾವೇರಿಗಾಗಿ ಇಂದು ನಾವು ಮೌನ ಪ್ರತಿಭಟನೆ ನಡೆಸುತ್ತಿದ್ದೇವೆ. ಕರ್ನಾಟಕಕ್ಕೆ ಕೆಟ್ಟದ್ದಾಗುವುದನ್ನು ನಾವು ನೋಡುವುದಿಲ್ಲ, ಕೇಳುವುದಿಲ್ಲ, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಿ ರಾಜ್ಯದ ಜನರಿಗೆ ಸರ್ಕಾರ ಒಳ್ಳೆಯ ಸಂದೇಶ ಸಾರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನೆಡೆಸಿದ್ದರಿಂದ ಅರ್ಧ ತಾಸು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಇತ್ತೀಚಿನ ಸುದ್ದಿ

Exit mobile version