ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೂಡಿ ಬಂದ ಪರಿಸರ ಪ್ರೇಮ - Mahanayaka

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೂಡಿ ಬಂದ ಪರಿಸರ ಪ್ರೇಮ

invitation card
08/12/2022

ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ. ಪರಿಸರ ನಮಗೆ ಎಷ್ಟೋ ಕೊಡುಗೆಗಳನ್ನು ನೀಡಿದೆ. ಆದ್ರೆ ಅದಕ್ಕೆ ಕೃತಜ್ಞತೆ ಸಲ್ಲಿಸುವುದು ನಮ್ಮ ಕರ್ತವ್ಯ. ಇಲ್ಲೊಬ್ಬರು ನಿವೃತ್ತ ಪ್ರಾಧ್ಯಾಪಕರೊಬ್ಬರಿದ್ದಾರೆ. ಈ ತರನೂ ನಾವು ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ರಾಜಮಣಿ ರಾಮಕುಂಜ ಇವರ ಪುತ್ರಿ ಮೇಧಾರಾಮಕುಂಜ ಅವರ ವಿವಾಹ ರಂಜನ್ ಆಚಾರ್ಯ ಅವರ ಜೊತೆಗೆ ಇದೇ ಡಿಸೆಂಬರ್‌ 14 ರಂದು ಬಿ.ಸಿ.ರೋಡಿನ ಮಹಾಲಿಂಗೇಶ್ವರ ದೇವಸ್ಥಾನದ ಮಾಂಗಲ್ಯ ಮಂಟಪದಲ್ಲಿ ನಡೆಯಲಿದೆ. ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ವಿಶೇಷತೆ ಇದೆ.

ಮದ್ಬೆ ಆಮಂತ್ರಣ ಪತ್ರಿಕೆಯ ಮುಖಪುಟದಲ್ಲಿ ಮದುಮಗ ಮತ್ತು ಮದುಮಗಳ ಚಿತ್ರವನ್ನು ಮಂಗಳೂರಿನ ಖ್ಯಾತ ಚಿತ್ರ ಕಲಾವಿದ ಭುವನ್ ಮಂಗಳೂರು ಅವರು ಬಿಡಿಸಿದ್ದಾರೆ. ಒಳಗಿನ ಪುಟದಲ್ಲಿ ಹೋಮ ಕುಂಡಲಿ ಇದೆ. ಅದರ ಜತೆಗೆ ‘ನಿಮ್ಮಿಂದ ಗಿಡವಾಗಲಿ’ ಎಂಬ ಬರಹದ ಅಡಿಯಲ್ಲಿ ಬೆಂಡೆಕಾಯಿ, ಬದನೆ, ಹರಿವೆ ಹಲಸಂಡೆ ಬೀಜಗಳ ಪ್ಯಾಕೆಟ್ ಇಟ್ಟಿದ್ದಾರೆ. ಈ ಮೂಲಕ ಕಾಗದ ಸಿಕ್ಕಿದ ಪ್ರತಿ ಮನೆಯಲ್ಲಿಯೂ ಗಿಡವೊಂದು ಮೊಳಕೆಯೊಡೆಯ ಬೇಕು. ಆ ಮೂಲಕ ಮನಪರಿವರ್ತನೆಯಾಗಿ ನಾವು ಪರಿಸರವನ್ನು ಉಳಿಸುವ ಪಣತೊಡ ಬೇಕು ಎಂಬುದೇ ಆಶಯವಾಗಿದೆ.

ಆಮಂತ್ರಣ ಪತ್ರಿಕೆ ನಾಲ್ಕು ಪುಟಗಳನ್ನು ಹೊಂದಿದ್ದು, ಕೊನೆಯ ಪುಟದಲ್ಲಿ ಪರಿಸರ ಸಂರಕ್ಷಣೆಯ ಬರಹಗಳು ಗಮನ ಸೆಳೆಯುತ್ತವೆ. ‘ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರಿಯಸಿ’ ಎಂಬ ತಲೆಬರಹದಡಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಬೇಡಿ. ಕಸ ಎಸೆಯಬೇಡಿ ಹೀಗೆ ಅನೇಕ ಪರಿಸರ ಸಂರಕ್ಷಣಾ ವಿಚಾರಗಳನ್ನು ಹೊಂದಿದ ಬರಹ ಇಲ್ಲಿವೆ.

invitation card

ಜೊತೆಗೆ ಮದುವೆ ಕಾರ್ಯಕ್ರಮದ ಪೌರೋಹಿತ್ಯ ಹಾಗೂ ಪಾಕಶಾಲೆಯ ನೇತೃತ್ವ ವಹಿಸಿದವರ ಹೆಸರು ಕೂಡಾ ಉಲ್ಲೇಖಿಸಲಾಗಿದೆ. ಇಷ್ಟೇ ಅಲ್ಲದೆ ಪ್ಲಾಸ್ಟಿಕ್ ಬಳಕೆ ಮಾಡಬೇಡಿ ಎಂಬ ಮಾಹಿತಿಗಾಗಿ ಮದುವೆಗೆ ಆಗಮಿಸುವ ಸರ್ವರಿಗೂ ಬಟ್ಟೆಯ ಕೈ ಚೀಲವೊಂದನ್ನು ನೀಡಲಾಗುತ್ತದೆ.

ಇದರಲ್ಲಿ ರಾಷ್ಟ್ರ ದೇವೋಭವ, ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರಿಯಸಿ. ಶ್ರೀರಸ್ತು ಶುಭ ಮಸ್ತು ಎಂಬ ಬರಹವನ್ನು ಪ್ರಿಂಟ್ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ