ಮಗುವಿನ ಪ್ರಾಣ ಉಳಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡ ಯುವತಿ - Mahanayaka

ಮಗುವಿನ ಪ್ರಾಣ ಉಳಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡ ಯುವತಿ

amrutha
30/04/2021

ತಿರುವನಂತಪುರಂ: ನದಿಗೆ ಬಿದ್ದ ನೆರೆಮನೆಯ ಮಗುವನ್ನು ಕಾಪಾಡಲು ಹೋದ ಯುವತಿಯೋರ್ವಳು ನೀರಿನಲ್ಲಿ ಮುಳುಗಿ ಪ್ರಾಣವನ್ನು ಕಳೆದುಕೊಂಡಿರುವ ದಾರುಣ ಘಟನೆ ಕೇರಳದ ಮಟ್ಟನೂರ್ ನಲ್ಲಿ ನಡೆದಿದೆ.


Provided by

25 ವರ್ಷ ವಯಸ್ಸಿನ  ಅಮೃತ ಮೃತಪಟ್ಟ ಯುವತಿಯಾಗಿದ್ದಾಳೆ. ನಿನ್ನೆ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ನೆರೆಮನೆಯ ಮಗುವಿನ ಪ್ರಾಣ ಉಳಿಸಲು ಅಮೃತ ನೀರಿಗೆ ಹಾರಿದ್ದು, ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ನೀರಿಗೆ ಬಿದ್ದ ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ. ಆದರೆ ಮಗುವನ್ನು ಕಾಪಾಡಲು ನೀಡರಿಗೆ ಹಾರಿದ ಅಮೃತಾ ನೀರಿನ ಸುಳಿಯೊಳಗೆ ಸಿಲುಕಿ ಮೇಲೆ ಬರಲಾಗದೇ ಮೃತಪಟ್ಟಿದ್ದಾರೆ.


Provided by

ಮೃತ ಅಮೃತಾ ಮುಂಡೇರಿ ಲ್ಯಾಬ್ ಸಹಾಯಕ ಸಿ ಬಾಲಕೃಷ್ಣನ್ ಅವರ ಪುತ್ರಿಯಾಗಿದ್ದಾರೆ. ಇವರನ್ನು ಕಳೆದುಕೊಂಡಿದ್ದರಿಂದ ಕುಟುಂಬ ಶೋಕಸಾಗರದಲ್ಲಿ ಮುಳುಗಿದ್ದು, ಮೌನ ಆವರಿಸಿದೆ.

ಇತ್ತೀಚಿನ ಸುದ್ದಿ