ನೆಲ್ಯಾಡಿ: ಮನೆಯ ಕೋಣೆಯಲ್ಲಿಯೇ ನೇಣಿಗೆ ಶರಣಾದ ಮಹಿಳೆ - Mahanayaka
12:22 PM Sunday 14 - September 2025

ನೆಲ್ಯಾಡಿ: ಮನೆಯ ಕೋಣೆಯಲ್ಲಿಯೇ ನೇಣಿಗೆ ಶರಣಾದ ಮಹಿಳೆ

rashmitha
18/10/2021

ನೆಲ್ಯಾಡಿ: ಮಹಿಳೆಯೊಬ್ಬರು ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ನಡೆದಿದ್ದು, ಇಲ್ಲಿನ ಪುತ್ಯೆ ಗ್ರಾಮದ ನಿವಾಸಿಯಾಗಿರುವ ಮಹಿಳೆ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ.


Provided by

ಪುತ್ಯೆ ನಿವಾಸಿ ರಾಜೇಶ್ ಎಂಬವರ ಪತ್ನಿ  28 ವರ್ಷ ವಯಸ್ಸಿನ ರಶ್ಮಿತಾ ಎಂಬವರು ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದೆ. ಸೋಮವಾರ ಮಧ್ಯಾಹ್ನದ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಅನೈತಿಕ ಪೊಲೀಸ್ ಗಿರಿಯ ಸಮರ್ಥನೆ: ಸಂಕಷ್ಟ ಸಿಲುಕಿದ ಸಿಎಂ ಬಸವರಾಜ್ ಬೊಮ್ಮಾಯಿ

ರಾಜ್ಯದಲ್ಲಿ ಅ.25ರಿಂದ 1ರಿಂದ 5ನೇ ತರಗತಿವರೆಗೆ ಶಾಲೆ ಆರಂಭ

ಮಧ್ಯಪ್ರದೇಶ: 12 ಲಕ್ಷ ಎತ್ತುಗಳ ‘ವೃಷಣ ಬೀಜ’ ಒಡೆಯುವ ಯೋಜನೆಗೆ ಬಿಜೆಪಿ ಸಂಸದೆಯಿಂದಲೇ ವಿರೋಧ

ಕಾರಿನ ಬದಲು ಅಡುಗೆ ಪಾತ್ರೆಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದ ವಧುವರ!

KSRTCಯಲ್ಲಿ ಕೆಲಸದ ಆಫರ್ ನೀಡಿ 500 ಮಂದಿಯನ್ನು ವಂಚಿಸಿದ ಇಬ್ಬರು ಅರೆಸ್ಟ್

ಜಾತಿನಿಂದನೆ ಪ್ರಕರಣ: ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಇತ್ತೀಚಿನ ಸುದ್ದಿ