ಮಣಿಪುರದಲ್ಲಿ ಬೆತ್ತಲೆ ಮೆರವಣಿ: ಪ್ರಮುಖ ಆರೋಪಿಯ ಮನೆಗೆ ಬೆಂಕಿ ಹಾಕಿದ ಪ್ರತಿಭಟನಾಕಾರರು - Mahanayaka

ಮಣಿಪುರದಲ್ಲಿ ಬೆತ್ತಲೆ ಮೆರವಣಿ: ಪ್ರಮುಖ ಆರೋಪಿಯ ಮನೆಗೆ ಬೆಂಕಿ ಹಾಕಿದ ಪ್ರತಿಭಟನಾಕಾರರು

manipur 1
21/07/2023

ಮಣಿಪುರದಲ್ಲಿ ಮಹಿಳೆಯರನ್ನ ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ್ದ ಪ್ರಕರಣವು ಮತ್ತಷ್ಟು ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಹುಯಿರೆಮ್ ಹೆರೊದಾಸ್ ಸಿಂಗ್ ಮನೆಗೆ ಬೆಂಕಿ ಹಾಕುವ ಮೂಲಕ ಪ್ರತಿಭಟನಾಕಾರರ ಗುಂಪೊಂದು ಆಕ್ರೋಶ ವ್ಯಕ್ತಪಡಿಸಿದೆ.


Provided by

ಮಣಿಪುರದ ಗುಡ್ಡಗಾಡು ಪ್ರದೇಶಗಳಲ್ಲಿ ಇಬ್ಬರು ಮಹಿಳೆಯರನ್ನ ಬೆತ್ತಲೆಯಾಗಿ ಮೆರವಣಿಗೆ ಮಾಡುವ ವೀಡಿಯೊ ಬುಧವಾರ ಸಾಮಾಜಿಕ ಮಾಧ್ಯಮದಲ್ಲಿ ರಾಷ್ಟ್ರವ್ಯಾಪಿ ಖಂಡನೆ ವ್ಯಕ್ತವಾಗಿತ್ತು. ಕಳೆದ ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಒಂದು ದಿನದ ನಂತರ ಕಾಂಗ್‌ಪೋಕ್ಪಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿತ್ತು. ವಿಡೀಯೋ ವೈರಲ್‌ ಆದ ಬಳಿಕ ರೊಚ್ಚಿಗೆದ್ದ ಜನ ಪ್ರತಿಭಟನೆಗೆ ಮುಂದಾಗಿದ್ದರು.

ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದ ಮಣಿಪುರದ ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸರು, ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಕೇಸ್‌ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಗುರುವಾರ ಸಂಜೆ ವೇಳೆಗೆ ನಾಲ್ವರನ್ನ ಬಂಧಿಸಲಾಗಿತ್ತು. ಆದರೂ ಪ್ರತಿಭಟನಾಕಾರರ ಆಕ್ರೋಶ ಮುಂದುವರಿದಿದ್ದು, ಶುಕ್ರವಾರವೂ ಹಿಂಸಾತ್ಮಕ ರೂಪ ತಾಳಿದೆ. ಆಕ್ರೋಶಗೊಂಡ ಪ್ರತಿಭಟನಾಕಾರರ ಗುಂಪು ಪ್ರಮುಖ ಆರೋಪಿ ಮನೆಗೆ ಬೆಂಕಿ ಹಚ್ಚಿ ಸುಟ್ಟುಹಾಕಿದೆ.


Provided by

ಬರೋಬ್ಬರಿ 77 ದಿನಗಳಿಂದ ಎರಡು ಪ್ರಮುಖ ಸಮುದಾಯಗಳ ನಡುವೆ ನಡೆಯುತ್ತಿರುವ ಸಂಘರ್ಷದ ಕಾರಣದಿಂದ ಮಣಿಪುರ ಎಂಬ ಪುಟ್ಟ ರಾಜ್ಯ ಹೊತ್ತಿ ಉರಿಯುತ್ತಿದೆ. ಈವರೆಗೂ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ