ಬಲವಂತ ಮತಾಂತರಕ್ಕೆ ಶಿಕ್ಷೆ ಸಂವಿಧಾನದಲ್ಲೇ ಗುರುತಿಸಲಾಗಿದ್ದು ಮತ್ತೊಂದು ಕಾಯ್ದೆ ಯಾಕೆ ಬೇಕು?: ಸಿದ್ದರಾಮಯ್ಯ

siddaramaiha
23/12/2021

ಬೆಳಗಾವಿ: ಬಿಜೆಪಿ ಸರ್ಕಾರ ಜಾರಿ ತರಲು ಹೊರಟಿರುವ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸದನದಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜಮಹಾರಾಜರು ಮತಾಂತರವಾಗಿದ್ದಾರೆ. ಆದರೆ ಶೂದ್ರರು ಎಲ್ಲಿಯೂ ಮತಾಂತರರಾಗಿಲ್ಲ ಬಿಜೆಪಿ, ಆರ್​ಎಸ್​ಎಸ್​ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪಂಪ ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿ, ಮತಾಂತರ ಆಗಿದ್ದು ಜೈನ ಧರ್ಮಕ್ಕೆ, ಬಸವಣ್ಣ ಹುಟ್ಟಿದ್ದು ಬ್ರಾಹ್ಮಣ ಜಾತಿಯಲ್ಲಿ ಆದರೆ ಅವರು ಮತಾಂತರ ಆಗಿದ್ದು ಲಿಂಗಾಯತರಾಗಿ. ಅಶೋಕ ಹುಟ್ಟಿದ್ದು ಕ್ಷತ್ರಿಯ ಸಮಾಜದಲ್ಲಿ ಆದರೆ ಮತಾಂತರವಾಗಿದ್ದು ಬೌದ್ಧ ಧರ್ಮಕ್ಕೆ. ಇದೆಲ್ಲವೂ ಮತಾಂತರವಲ್ಲವೇ ಎಂದು ಪ್ರಶ್ನಿಸಿದರು.

ಬಲತ್ಕಾರ, ಆಸೆ ಅಮಿಷ ಒಡ್ಡಿ ಮತಾಂತರಕ್ಕೆ ಶಿಕ್ಷೆ. ಸಂವಿಧಾನದಲ್ಲೇ ಗುರುತಿಸಲಾಗಿದೆ. ಹೀಗಿರುವಾಗ ಮತ್ತೊಂದು ಕಾಯ್ದೆ ಯಾಕೆ ಬೇಕು..? ಎಂದು ಪ್ರಶ್ನಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಂಬೇಡ್ಕರ್ ಯಾಕೆ ಬೌದ್ಧ ಧರ್ಮ ಸ್ವೀಕರಿಸಿದರು? | ಸದನದಲ್ಲಿ ನಡೆಯಿತು ಭಾರೀ ಚರ್ಚೆ!

ರಾಜ್ಯದಲ್ಲಿ ಶೀಘ್ರದಲ್ಲೇ ಉದ್ಯೋಗ ನೀತಿ ಜಾರಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರಲ್ಲಿ ಹವಾಲಾ ದಂಧೆ ಬೆಳಕಿಗೆ: ನಾಲ್ಕು ಮಂದಿ ಆರೋಪಿಗಳ ಬಂಧನ

ಲೂಧಿಯಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ: ಇಬ್ಬರು ಸಾವು, ಐದು ಮಂದಿ ಗಾಯ

ಬಿಜೆಪಿ ಮುಖಂಡರಿಂದ ಅಯೋಧ್ಯೆ ಸುತ್ತಲಿನ ಭೂಮಿ ಲೂಟಿ: ಪ್ರಿಯಾಂಕಾ ಗಾಂಧಿ ಆರೋಪ

ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಕರೆ

 

ಇತ್ತೀಚಿನ ಸುದ್ದಿ

Exit mobile version