ಇನ್ನಷ್ಟು ಮುಖಂಡರು ಶೀಘ್ರವೇ ಬಿಜೆಪಿಗೆ: ಆರ್.ಅಶೋಕ್ - Mahanayaka

ಇನ್ನಷ್ಟು ಮುಖಂಡರು ಶೀಘ್ರವೇ ಬಿಜೆಪಿಗೆ: ಆರ್.ಅಶೋಕ್

r ashok
04/03/2023

ರಾಮನಗರ: ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪ್ರಯತ್ನ ನಡೆಸುತ್ತೇವೆ ಮತ್ತು ಗೆಲುವು ಸಾಧಿಸುತ್ತೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ಇತರ ಪಕ್ಷಗಳ ಇನ್ನಷ್ಟು ಮುಖಂಡರು ಬಿಜೆಪಿ ಸೇರಲು ಮಾತುಕತೆ ನಡೆಯುತ್ತಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರು ತಿಳಿಸಿದರು.


Provided by

ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ತಂಡವು 67 ಕ್ಷೇತ್ರಗಳಲ್ಲಿ ಸಂಚರಿಸಲಿದೆ. ರಥಯಾತ್ರೆ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸ್ಸಿದ್ಧ ಎಂದರು. ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್‍ನ ಎ ಟೀಂ ಮತ್ತು ಬಿ ಟೀಮನ್ನು ಮನೆಗೆ ಕಳುಹಿಸಿ ಬಿಜೆಪಿಯನ್ನು ಜನರು ಗೆಲ್ಲಿಸಲಿದ್ದಾರೆ. ನರೇಂದ್ರ ಮೋದಿಜಿ ಅವರ ಅಭಿವೃದ್ಧಿ ಕಾರ್ಯಗಳು ಇದಕ್ಕೆ ಪೂರಕ ಎಂದು ಅವರು ವಿಶ್ಲೇಷಿಸಿದರು.

ಕಾಂಗ್ರೆಸ್ಸಿನ ಕೇಂದ್ರ ಸರಕಾರ ಕೊಡುತ್ತಿದ್ದ ಹಣದ ನಾಲ್ಕೈದು ಪಟ್ಟು ಹೆಚ್ಚು ಹಣವನ್ನು ಮೋದಿಜಿ ಸರಕಾರವು ನೀಡುತ್ತಿದೆ. ಡಬಲ್ ಎಂಜಿನ್ ಸರಕಾರ ಇದ್ದರೆ ಹೆಚ್ಚು ಅಭಿವೃದ್ಧಿ ಸಾಧ್ಯ ಎಂದು ಜನರು ಅರ್ಥ ಮಾಡಿಕೊಂಡಿದ್ದಾರೆ. ಮೂರು ರಾಜ್ಯಗಳ ಚುನಾವಣೆಯಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಇನ್ನೊಂದು ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಬರಲಿದೆ ಎಂದರಲ್ಲದೆ, ದೇಶದ ಈಶಾನ್ಯ ಭಾಗ ಸೇರಿ ಎಲ್ಲೆಡೆ ಬಿಜೆಪಿ ಜಯಭೇರಿ ಬಾರಿಸುತ್ತಿದೆ. ಕರ್ನಾಟಕದಲ್ಲೂ ಜನರು ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Provided by

ಇಂದಿನ ಯಾತ್ರೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಚಿವ ಡಾ. ಅಶ್ವತ್ಥನಾರಾಯಣ್, ಯೋಗೇಶ್ವರ್ ಅವರು ಈ ರಥಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಉತ್ತರ ಪ್ರದೇಶದಲ್ಲೂ ರಥಯಾತ್ರೆ ಮೂಲಕ ಗೆಲುವು ಸಾಧಿಸಿದ್ದೇವೆ. ಕಾಂಗ್ರೆಸ್- ಜೆಡಿಎಸ್ ಯಾತ್ರೆಗಳು ಅಂತ್ಯಗೊಂಡಿವೆ. ನಮ್ಮ 4 ತಂಡಗಳ ರಥಯಾತ್ರೆ ನಡೆದಿದೆ ಎಂದರು.

ಪಕ್ಷ ಹಿಂದೆ ಇರುವಲ್ಲಿ ಹೆಚ್ಚು ಆದ್ಯತೆ ಕೊಡಲಿದ್ದೇವೆ ಎಂದ ಅವರು, ವಿಧಾನಸೌಧದ ಬದಲಾಗಿ ಹೋಟೆಲ್‍ನಿಂದ ಆಡಳಿತ ನಡೆಸಿದ್ದ ಕುಮಾರಸ್ವಾಮಿ ಅವರಿಂದ ನಾವೇನೂ ಪಾಠ ಕಲಿಯಬೇಕಾಗಿಲ್ಲ. ಸಿದ್ದರಾಮಯ್ಯ- ಕುಮಾರಸ್ವಾಮಿ ಆಡಳಿತದಲ್ಲಿದ್ದಾಗ ಸಿಎಂ, ಶಾಸಕರ ಮೇಲೆ 70ಕ್ಕೂ ಹೆಚ್ಚು ಪ್ರಕರಣಗಳಿದ್ದವು. ಲೋಕಾಯುಕ್ತವನ್ನೇ ಮುಚ್ಚಿ ಪ್ರಕರಣದ ತನಿಖೆ ಮಾಡದಂತೆ ನೋಡಿಕೊಂಡರು ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಚಿವ ಡಾ. ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮತ್ತು ಇತರರು ಇದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ