ನಾಪತ್ತೆಯಾಗಿದ್ದ ಯುವಕನ ಬಿಡುಗಡೆಗೆ ಚೀನಾ ಒಪ್ಪಿಗೆ: ಕೇಂದ್ರ ಸಚಿವ ಕಿರಣ್ ರಿಜಿಜು - Mahanayaka
3:18 AM Thursday 19 - September 2024

ನಾಪತ್ತೆಯಾಗಿದ್ದ ಯುವಕನ ಬಿಡುಗಡೆಗೆ ಚೀನಾ ಒಪ್ಪಿಗೆ: ಕೇಂದ್ರ ಸಚಿವ ಕಿರಣ್ ರಿಜಿಜು

miram-Kiren-Rijiju
26/01/2022

ನವದೆಹಲಿ: ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿರುವ ಯುವಕನ ಬಿಡುಗಡೆಗೆ ಚೀನಾ ಸೂಚಿಸಿದ್ದು, ದಿನಾಂಕ ಮತ್ತು ಸಮಯವನ್ನು ಶೀಘ್ರದಲ್ಲೇ ಹಂಚಿಕೊಳ್ಳಲಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಚೀನಾ ಕೂಡ ಕಾಣೆಯಾಗಿದ್ದ ಅಪ್ಪರ್ ಸಿಯಾಂಗ್ ಜಿಲ್ಲೆಯ ಜಿಡೋ ಗ್ರಾಮದ ನಿವಾಸಿಯಾಗಿರುವ ಮಿರಾಮ್ ಟ್ಯಾರೋನ್ ಎಂಬ ಅಪ್ರಾಪ್ತ ಯುವಕನ ಬಿಡುಗಡೆಯ ಸ್ಥಳವನ್ನು ಸೂಚಿಸಿದೆ ಮತ್ತು ಹವಾಮಾನ ವೈಪರೀತ್ಯ ದಿಂದಾಗಿ ವಿಳಂಬವಾಗಿದೆ ಎಂದು ಸಚಿವ ಕಿರಣ್ ರಿಜಿಜು ಹೇಳಿದರು.

ಭಾರತೀಯ ಸೇನೆಯು ಗಣರಾಜ್ಯೋತ್ಸವ ದಿನದಂದು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯೊಂದಿಗೆ ಹಾಟ್‌ ಲೈನ್ ಮೂಲಕ ಭಾರತದ ಅಪ್ರಾಪ್ತ ಯುವಕನನ್ನು ಹಸ್ತಾಂತರಿಸುವುದಾಗಿ ಪ್ರತಿಕ್ರಿಯಿಸಿದೆ ಮತ್ತು ಬಿಡುಗಡೆಯ ಸ್ಥಳವನ್ನು ಸೂಚಿಸಿದೆ. ಅವರು ಶೀಘ್ರದಲ್ಲೇ ದಿನಾಂಕ ಮತ್ತು ಸಮಯವನ್ನು ತಿಳಿಸುವ ಸಾಧ್ಯತೆಯಿದೆ. ಹವಾಮಾನ ವೈಪರೀತ್ಯದಿಂದಾಗಿ ವಿಳಂಬವಾಗಿದೆ ಎಂದು ಸಚಿವರು ವಿವರಿಸಿದರು.


Provided by

ಮಿರಾಮ್ ಟ್ಯಾರೋನ್ 2022 ರ ಜ. 18ರಂದು ಬಿಶಿಂಗ್ ಪ್ರದೇಶದ ಶಿಯುಂಗ್ ಲಾದಿಂದ ನಾಪತ್ತೆಯಾಗಿದ್ದನು. ಅರುಣಾಚಲ ಪ್ರದೇಶದ ತ್ಸಾಂಗ್ಪೋ ನದಿ ಭಾರತವನ್ನು ಪ್ರವೇಶಿಸುವ ಸ್ಥಳದ ಬಳಿ ಈ ಘಟನೆ ನಡೆದಿದೆ ಎಂದು ಸಂಸದರು ಹೇಳಿದ್ದಾರೆ. ತ್ಸಾಂಗ್ಪೋವನ್ನು ಅರುಣಾಚಲ ಪ್ರದೇಶದಲ್ಲಿ ಸಿಯಾಂಗ್ ಮತ್ತು ಅಸ್ಸಾಂನಲ್ಲಿ ಬ್ರಹ್ಮಪುತ್ರ ಎಂದು ಕರೆಯಲಾಗುತ್ತದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ಕಟ್ಟಿ ಎಸೆದ ಆರೋಪಿಗಳ ಬಂಧನ

ಮಾನವ ಕಳ್ಳಸಾಗಣೆ: 41 ಆರೋಪಿಗಳಿಗೆ ಕಠಿಣ ಶಿಕ್ಷೆ

ಅಪಘಾತದಲ್ಲಿ ಮರ್ಮಾಂಗ ಕಳೆದುಕೊಂಡ ಯುವಕನಿಗೆ 17.66 ಲಕ್ಷ ರೂ. ಪರಿಹಾರ

ಬೆತ್ತಲೆ ಗ್ಯಾಂಗ್ ಬ್ಲಾಕ್ ​ಮೇಲ್​​: ರೈಲಿಗೆ ತಲೆ ಕೊಟ್ಟು ಇಂಜಿನಿಯರ್ ಆತ್ಮಹತ್ಯೆಗೆ ಶರಣು

ಆರ್ಯಭಟ ಪ್ರಶಸ್ತಿ ಪುರಸ್ಕೃತ ಖ್ಯಾತ ಗಾಯಕಿ ಶೀಲಾ ದಿವಾಕರ್ ನಿಧನ

 

ಇತ್ತೀಚಿನ ಸುದ್ದಿ