ನೀರು ಎಂದು ಭಾವಿಸಿ ಪೆಟ್ರೋಲ್ ಕುಡಿದ ವೃದ್ಧೆ ಸಾವು! - Mahanayaka
11:55 AM Sunday 22 - September 2024

ನೀರು ಎಂದು ಭಾವಿಸಿ ಪೆಟ್ರೋಲ್ ಕುಡಿದ ವೃದ್ಧೆ ಸಾವು!

bantwal
30/09/2021

ಬಂಟ್ವಾಳ:  ನೀರು ಎಂದು ಭಾವಿಸಿ ಪೆಟ್ರೋಲ್ ಕುಡಿದ ವೃದ್ಧೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ ಸಂಪದ ಕೊಡಿ ಎಂಬಲ್ಲಿ ನಡೆದಿದ್ದು, ತಮ್ಮ ಮಗಳ ಮನೆಯಲ್ಲಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

79 ವರ್ಷ ವಯಸ್ಸಿನ ವೃದ್ಧೆ ಪದ್ಮಾವತಿ ಮೃತಪಟ್ಟ ವೃದ್ಧೆಯಾಗಿದ್ದು,  ಮಗಳ ಮನೆಯಲ್ಲಿ ಹುಲ್ಲು ಕತ್ತರಿಸುವ ಯಂತ್ರಕ್ಕೆಂದು ಬಾಟಲಿಯಲ್ಲಿ ತುಂಬಿದ ಪೆಟ್ರೋಲ್ ಇಡಲಾಗಿತ್ತು. ವಯೋಸಹಜ ದೃಷ್ಟಿ ದೋಷ ಹೊಂದಿದ್ದ ಪದ್ಮಾವತಿ ಅವರು,  ಪೆಟ್ರೋಲ್ ನ್ನು ನೀರು ಎಂದು ಭಾವಿಸಿ ಸೇವಿಸಿದ್ದರು.

ಪೆಟ್ರೋಲ್ ಸೇವನೆಯಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು  ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಮೃತರ ಅಳಿಯ ಉಮಾನಾಥ್ ಅವರು ನೀಡಿದ ದೂರಿನನ್ವಯ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಸುಳ್ಯ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯಿಂದ ಅಂಬೇಡ್ಕರ್ ಅವರ ಜೀವನ ಕುರಿತ ಹಾಡು ಬಿಡುಗಡೆ

ಯತೀಶ್ ಕುಮಾರ್ ರವರಿಗೆ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಮಾಡಿದ ರವಿ ಡಿ. ಚೆನ್ನಣ್ಣನವರ್

ಬ್ರೇಕಿಂಗ್ ನ್ಯೂಸ್:  ಡೆತ್ ನೋಟ್ ಬರೆದಿಟ್ಟು ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು

ಮಂಗಳೂರು: ನಿಮ್ಮ ವಾಹನದ ವಿಮೆ ಅವಧಿ ಮುಗಿದಿದ್ದರೆ 4 ಸಾವಿರದವರೆಗೆ ದಂಡ ಖಚಿತ

ಕಣ್ಣ ಮುಂದೆಯೇ ಬಾಲಕನಿಗೆ ವಿದ್ಯುತ್ ಶಾಕ್ ಹೊಡೆದರೂ ರಕ್ಷಿಸಲು ಸಾಧ್ಯವಾಗಲಿಲ್ಲ!

ದಿ ನ್ಯೂಯಾರ್ಕ್ ಟೈಮ್ಸ್ ನಲ್ಲಿ ಮೋದೀಜಿಯ ಪ್ರವಾಸದ ಬಗ್ಗೆ ಯಾವುದೇ ವರದಿ ಪ್ರಕಟವಾಗಿಲ್ಲ, ವೈರಲ್ ಫೋಟೋ: ಫೇಕ್ ಪತ್ರಿಕೆ ಸ್ಪಷ್ಟನೆ

ರಾಜ್ಯದಲ್ಲಿ ಮತ್ತೊಂದು ದಲಿತ ದೌರ್ಜನ್ಯ: ಬೆಳ್ಳಂಬೆಳಗ್ಗೆ  ದಲಿತರ ಗುಡಿಸಲುಗಳನ್ನು ಧ್ವಂಸ ಮಾಡಿದ ಅಧಿಕಾರಿಗಳು

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ನಾಪತ್ತೆ!

ಶಾಕಿಂಗ್ ನ್ಯೂಸ್: ಅಪರಿಚಿತ ತಂಡದಿಂದ ಬೀಡಿ ಬ್ರ್ಯಾಂಚ್ ಗೆ ಹೋಗುತ್ತಿದ್ದ ಬಾಲಕನ ಅಪಹರಣಕ್ಕೆ ಯತ್ನ

ಇತ್ತೀಚಿನ ಸುದ್ದಿ