ಸಾಲಬಾಧೆ: ವಿಜಯಪುರದಲ್ಲಿ ನಿವೃತ್ತ ಯೋಧ ಆತ್ಮಹತ್ಯೆ - Mahanayaka
11:23 AM Wednesday 12 - March 2025

ಸಾಲಬಾಧೆ: ವಿಜಯಪುರದಲ್ಲಿ ನಿವೃತ್ತ ಯೋಧ ಆತ್ಮಹತ್ಯೆ

revana siddappa
16/01/2022

ವಿಜಯಪುರ: ಸಾಲಬಾಧೆ ತಾಳಲಾರದೆ ನಿವೃತ್ತ ಯೋಧರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಕಕ್ಕಳಮೇಲ ಗ್ರಾಮದಲ್ಲಿ ನಡೆದಿದೆ.

ನಿವೃತ್ತ ಯೋಧ ರೇವಣಸಿದ್ದಪ್ಪ ಗಾಣಿಗೇರ ಅಲಿಯಾಸ್ ದೇಸಾಯಿ ಮೃತ ಯೋಧ ಎಂದು ತಿಳಿದುಬಂದಿದೆ.

ರೇವಣಸಿದ್ದಪ್ಪ ಸೇನೆಯಿಂದ ನಿವೃತ್ತರಾದ ಮೇಲೆ ಗ್ರಾಮದಲ್ಲಿ ಸಾಲ ಮಾಡಿ ಜಮೀನು ಖರೀದಿಸಿದ್ದು, ಮಾಡಿದ ಸಾಲವನ್ನು ತೀರಿಸಲಾಗದೇ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


Provided by

ಈ ಘಟನೆ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೆಳಗಾವಿ: ರೂಬೆಲ್ಲಾ ಚುಚ್ಚುಮದ್ದು ಪಡೆದ ಮೂವರು ಕಂದಮ್ಮಗಳು ಸಾವು

ಬಾತ್ ರೂಮ್ ನಲ್ಲೇ ತಾಯಿ, ಮಗು ದಾರುಣ ಸಾವು | ಸ್ನಾನದ ಕೋಣೆಯಲ್ಲಿ ದುರಂತ ಸಾವು

ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಗೆ ಗುಂಡು ಹಾರಿಸಿ ಬರ್ಬರ ಹತ್ಯೆ

ಭಾರತದ ಕೃಷಿ ಅಪಾಯಕಾರಿ ಭವಿಷ್ಯದತ್ತ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಇತ್ತೀಚಿನ ಸುದ್ದಿ