ಬೇಸಿಗೆ ಮಳೆ... ಸಿಡಿಲಿನ‌ ಬಡಿತಕ್ಕೆ ಧಗಧಗಿಸಿದ ತೆಂಗಿನಮರ - Mahanayaka

ಬೇಸಿಗೆ ಮಳೆ… ಸಿಡಿಲಿನ‌ ಬಡಿತಕ್ಕೆ ಧಗಧಗಿಸಿದ ತೆಂಗಿನಮರ

lightning
15/03/2023

ಚಾಮರಾಜನಗರ: ಸಿಡಿಲ ಬಡಿತಕ್ಕೊಳಗಾಗಿ ಕಲ್ಪವೃಕ್ಷ(ತೆಂಗಿನ ಮರ)ವೊಂದು ಧಗಧಗ ಹೊತ್ತಿ ಉರಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನಭೀಡು ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.

ಭೀಮನಬೀಡು ಗ್ರಾಮದ ಕೃಷ್ಣಶೆಟ್ಟಿ ಎಂಬುವವರ ಜಮೀನಿನಲ್ಲಿ ಘಟನೆ ಜರುಗಿದ್ದು, ಅದೃಷ್ಟವಶಾಃತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬುಧವಾರ ಸಂಜೆ ಸಾಮಾನ್ಯ ಮಳೆಯಾಗುತ್ತಿದ್ದ ವೇಳೆ ಸಿಡಿಲು ಬಡಿತಕ್ಕೆ ತೆಂಗಿನ  ಮರ ಸಂಪೂರ್ಣ ಸುಟ್ಟು ಕರಕಲಾಗಿದೆ.

ಒಂದೆಡೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು ಸಾರ್ವಜನಿಕರು ಕಂಗಾಲಾಗಿದ್ದಾರೆ ಮತ್ತೊಂದೆಡೆ ಅಕಾಲಿಕ ಮಳೆ ಸುರಿಯುತ್ತಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ