ಪಂಚಮಸಾಲಿ ಸಮಾಜ 2 ಎ ಮೀಸಲಾತಿಗೆ ಸೇರ್ಪಡೆ ವಿಚಾರ: ಸಿಎಂ ಯಡಿಯೂರಪ್ಪ ಯೂಟರ್ನ್ - Mahanayaka
3:04 AM Thursday 19 - September 2024

ಪಂಚಮಸಾಲಿ ಸಮಾಜ 2 ಎ ಮೀಸಲಾತಿಗೆ ಸೇರ್ಪಡೆ ವಿಚಾರ: ಸಿಎಂ ಯಡಿಯೂರಪ್ಪ ಯೂಟರ್ನ್

06/02/2021

ಬೆಂಗಳೂರು: ಪಂಚಮಸಾಲಿ ಸಮಾಜವನ್ನು 2 ಎ ಮೀಸಲಾತಿ ಸೇರಿಸುವ ವಿಚಾರ ಹಿಂದುಳಿದ ವರ್ಗಗಳ ಆಯೋಗಕ್ಕೆ ಆಯೋಗಕ್ಕೆ ತಿಳಿಸಿದ್ದೇನೆ, ಈ ಬಗ್ಗೆ ವರದಿ ಸಲ್ಲಿಸಲು ಕೋರಲಾಗಿದೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಅಧಿವೇಶನದಲ್ಲಿ ನನ್ನ ಹೇಳಿಕೆಯನ್ನು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಗಳು ಅಪಾರ್ಥ ಮಾಡಿಕೊಂಡಿದ್ದಾರೆ. ನಾನು ಇಂದಿನ ಅಧಿವೇಶನದಲ್ಲಿ ಹೇಳಿದ್ದೇನೆಂದರೆ ‘ ನಮ್ಮದೊಂದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ಎಲ್ಲಾ ಸಂಸತ್ ಸದಸ್ಯರ ಜೊತೆ ಚರ್ಚಿಸಿ ಮುಂದೆ ರಾಷ್ಟ್ರೀಯ ನಾಯಕರೊಂದಿಗೆ ಈ ವಿಷಯದ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಅವರು ಸಮರ್ಥಿಸಿದರು.

ನಮ್ಮ ಸರ್ಕಾರ ಈ ಹಿಂದೆ ಪಂಚಮಸಾಲಿ ಸಮಾಜವನ್ನು 3 ಬಿ ಸೇರಿಸಿರುವುದನ್ನು ನೆನಪಿಸಿಕೊಳ್ಳಬಹುದಾಗಿದೆ. ರಾಜ್ಯದ ಸಿಎಂ ಆಗಿ ಎಲ್ಲಾ ಸಮುದಾಯಗಳ ಒಳಿತಿಗೆ ಬದ್ದನಾಗಿರುತ್ತೇನೆ., ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.


Provided by

ಇತ್ತೀಚಿನ ಸುದ್ದಿ