ಲೋಕಸಭೆಯಲ್ಲಿ 'ಮಣಿಪುರ' ಗದ್ದಲ: ಕಲಾಪ ನಾಳೆಗೆ ಮುಂದೂಡಿಕೆ - Mahanayaka

ಲೋಕಸಭೆಯಲ್ಲಿ ‘ಮಣಿಪುರ’ ಗದ್ದಲ: ಕಲಾಪ ನಾಳೆಗೆ ಮುಂದೂಡಿಕೆ

26/07/2023

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ವಿಷಯದಡಿಯಲ್ಲಿ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.


Provided by

ಇದಕ್ಕೂ ಮುನ್ನ ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಸದನವನ್ನು ಎರಡು ಬಾರಿ ಮುಂದೂಡಬೇಕಾಯಿತು. ಬೆಳಗ್ಗೆ ಕಲಾಪ ಆರಂಭವಾಗುತ್ತಲೇ ಮಣಿಪುರ ಹಿಂಸಾಚಾರದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಸದನದಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದ ವಿಪಕ್ಷಗಳು, ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತು ಬಿಆರ್‌ಎಸ್ ಪಕ್ಷಗಳು ಬುಧವಾರ ಅವಿಶ್ವಾಸ ನಿರ್ಣಯ ಮಂಡಿಸಿದವು. ಇದನ್ನು ಸ್ಪೀಕರ್ ಓಂ ಬಿರ್ಲಾ ಅವರು ಒಪ್ಪಿಕೊಂಡರು.

ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ ಸೇರಿದಂತೆ ಆರು ಮಸೂದೆಗಳನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಸದನವು ಅರಣ್ಯ (ಸಂರಕ್ಷಣೆ) ಕಾಯಿದೆಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಅಂಗೀಕರಿಸಿತು.


Provided by

ಸದನ ಸೇರಿದಾಗ ಮೊದಲಿಗೆ, ಸದಸ್ಯರು ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಕೂಡಲೇ ಪ್ರತಿಭಟನೆಗಳು ಪ್ರಾರಂಭವಾದವು. ಪ್ರಶ್ನೋತ್ತರ ವೇಳೆಯಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರದ ವಿಷಯ ಪ್ರಸ್ತಾಪಿಸಲು ವಿರೋಧ ಪಕ್ಷದ ಸದಸ್ಯರು ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ಅವಿಶ್ವಾಸ ಗೊತ್ತುವಳಿ ಮಂಡನೆಯಾದ ನಂತರ ಎರಡನೇ ಬಾರಿ ಕಲಾಪವನ್ನು ಮುಂದೂಡಲಾಯಿತು ಮತ್ತು ಪ್ರತಿಭಟನೆಯ ನಡುವೆ ಜನನ ಮತ್ತು ಮರಣ ನೋಂದಣಿ ಕಾಯ್ದೆ ತಿದ್ದುಪಡಿ ಸೇರಿದಂತೆ ಆರು ಮಸೂದೆಗಳನ್ನು ಮಂಡಿಸಲಾಯಿತು. ಇದೇ ವೇಳೆ ಲೋಕಸಭೆಯು ಸಂಕ್ಷಿಪ್ತ ಚರ್ಚೆಯ ನಂತರ ಅರಣ್ಯ (ಸಂರಕ್ಷಣೆ) ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲಾಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ