ಪತ್ನಿ, ಮಕ್ಕಳನ್ನು ಒಬ್ಬೊಬ್ಬರಾಗಿ ಹತ್ಯೆ ಮಾಡಿ ನೇಣಿಗೆ ಶರಣಾದ ಪತಿ

uttar pradesh
16/04/2022

ಉತ್ತರಪ್ರದೇಶ: ಮೂವರು ಮಕ್ಕಳು ಹಾಗೂ ಪತ್ನಿಯನ್ನು ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿ ತಾನೂ ನೇಣಿಗೆ ಶರಣಾಗಿರುವ ಘಟನೆ ನವಾಬ್‍ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕಗಲ್‍ಪುರ ಗ್ರಾಮದಲ್ಲಿ ನಡೆದಿದೆ.

ರಾಹುಲ್‍ ತಿವಾರಿ ಅವರ ಪತ್ನಿ ಪ್ರೀತಿ ಮತ್ತು ಮೂವರು ಪುತ್ರಿಯರಾದ ಮಹಿ, ಪುಹು ಮತ್ತು ಪೋಹು ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಐದು ಮೃತದೇಹಗಳ ಪೈಕಿ ನಾಲ್ಕು ಮೃತದೇಹಗಳ ಮೇಲೆ ಹರಿತವಾದ ಆಯುಧದಿಂದ ಚುಚ್ಚಿರುವ ಗಾಯ ಕಂಡು ಬಂದಿದೆ. ಮನೆಯ ಯಜಮಾನ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಕ್ಕಳು ಮತ್ತು ಪತ್ನಿಯನ್ನು ಒಬ್ಬೊಬ್ಬರನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ರಾಹುಲ್ ತಿವಾರಿ ಬಳಿಕ ತಾನು ನೇಣಿಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು,  ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೊಮ್ಮಾಯಿ ಅಂದ್ರೆ ನಾನು ಏನೋ ಅಂದುಕೊಂಡಿದ್ದೆ… | ಡಿ.ಕೆ.ಶಿವಕುಮಾರ್

ಮೆಗಿ ಚಂಡಮಾರುತಕ್ಕೆ  167 ಮಂದಿ ಬಲಿ: 110 ಮಂದಿ ನಾಪತ್ತೆ

ಭಾರೀ ಚಿನ್ನದ ಬೇಟೆ:  ಒಂದೂವರೆ ಕೋಟಿ ಚಿನ್ನ  ವಶ

ಅಸಭ್ಯ ವರ್ತನೆ: ಉಪನ್ಯಾಸಕನಿಗೆ ಸ್ಟಾಪ್  ರೂಮ್ ನಲ್ಲಿ ಹಿಗ್ಗಾಮುಗ್ಗಾ ಥಳಿತ!

ಎಸ್ಸಿ-ಎಸ್ಟಿ ಮಕ್ಕಳಿಗೆ ನೀಡುವ ಹಾಸಿಗೆ, ದಿಂಬುಗಳಲ್ಲಿಯೂ ಕಾಂಗ್ರೆಸ್ ಭ್ರಷ್ಟಾಚಾರ ಮಾಡಿದೆ | ಬೊಮ್ಮಾಯಿ ವಾಗ್ದಾಳಿ

 

ಇತ್ತೀಚಿನ ಸುದ್ದಿ

Exit mobile version