ಕಾವೇರಿ ನದಿಯಲ್ಲಿ ಅಪಾಯ ತಂದುಕೊಳ್ಳುತ್ತಿರುವ ಜನ:  ಪೊಲೀಸರ ಜಾಣ ಮೌನ - Mahanayaka

ಕಾವೇರಿ ನದಿಯಲ್ಲಿ ಅಪಾಯ ತಂದುಕೊಳ್ಳುತ್ತಿರುವ ಜನ:  ಪೊಲೀಸರ ಜಾಣ ಮೌನ

Kaveri river
29/11/2022

ಚಾಮರಾಜನಗರ: ಅಪಾಯವನ್ನು ಲೆಕ್ಕಿಸದೇ ಪ್ರವಾಸಿಗರು ತಮ್ಮ ಕುಟುಂಬದೊಟ್ಟಿಗೆ ನೀರಿನಲ್ಲಿ ಆಟ ಆಡುವವರ ಸಂಖ್ಯೆ ಹೆಚ್ಚಾಗುತ್ತಿರುವ ಘಟನೆ ಚಾಮರಾಜನಗರದ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ವೆಸ್ಲಿ ಸೇತುವೆ ಬಳಿ ನಡೆಯುತ್ತಿದೆ.


Provided by

ಮಳೆಯ ಆರ್ಭಟಕ್ಕೆ ಎರಡು ವರ್ಷಗಳ ಹಿಂದೆಯೇ ವೆಸ್ಲಿ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿತ್ತು‌. ಉಳಿದ ಭಾಗದ ಮೇಲಿನ ಓಡಾಟಕ್ಕೆ ನಿರ್ಬಂಧವಿದ್ದರೂ ಇದನ್ನು ಲೆಕ್ಕಿಸದೆ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಮೋಜು ಮಾಡುತ್ತಿದ್ದಾರೆ.


Provided by

ನದಿಯನ್ನು ಕಂಡ ಕೂಡಲೇ ನೀರಿಗೆ ಇಳಿಯುವ ಹುಚ್ಚು ಬಹುತೇಕ ಪ್ರವಾಸಿಗರಿಗೆ ಇರುತ್ತದೆ. ಪ್ರವಾಸಿ ಸ್ಥಳಗಳಲ್ಲಿ ಎಚ್ಚರಿಕೆ ಫಲಕ ಹಾಕಿದ್ದರೂ, ಅದನ್ನು ನಿರ್ಲಕ್ಷಿಸಿ ನೀರಿಗೆ ಇಳಿಯುತ್ತಿದ್ದಾರೆ. ಇಂತಹವರಲ್ಲಿ ಹೊರ ಜಿಲ್ಲೆಗಳಿಂದ ಬಂದವರೇ ಹೆಚ್ಚು. ಅದರಲ್ಲೂ ಬೆಂಗಳೂರಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಭರಚುಕ್ಕಿ ಜಲಪಾತ ವೀಕ್ಷಣೆಗೆಂದು ಬಂದವರಲ್ಲಿ ಕೆಲವರು, ವೆಸ್ಲಿ ಸೇತುವೆ ಕೆಳಗಡೆ ನೀರಿನಲ್ಲಿ ಆಟವಾಡಲು ಹೋಗುತ್ತಾರೆ. ಮದ್ಯಪಾನ ಮಾಡಿ ನೀರಿನಲ್ಲಿ ಈಜಲು  ತೆರಳುವುದು ಕೂಡ ನಡೆಯುತ್ತಿದ್ದು ಇದಕ್ಕೂ ಕಡಿವಾಣ ಬೀಳಬೇಕಿದೆ.

ನದಿಗೆ ಇಳಿಯುವ ಸ್ಥಳದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಎಚ್ಚರಿಕೆ ಫಲಕ ಹಾಕಲಾಗಿದೆ. ಆದರೂ, ಪ‍್ರವಾಸಿಗರು ನೀರಿಗೆ ಇಳಿಯುತ್ತಿದ್ದಾರೆ. ಎಚ್ಚರಿಕೆ ಫಲಕ ಇಲ್ಲದಿರುವ ಕಡೆಗಳಲ್ಲಿ, ಸಿಬ್ಬಂದಿ ಇಲ್ಲದಿರುವ ಜಾಗದಲ್ಲಿ ಈಜಾಟ ಅಥವಾ ನೀರಿನಲ್ಲಿ ಆಟವಾಡುವುದಕ್ಕೆ ತೆರಳುತ್ತಾರೆ. ಇದಕ್ಕೆ ಕಡಿವಾಣ  ಹಾಕದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ