ಉಪ್ಪಿನಂಗಡಿ ಪೊಲೀಸರ ಕಟ್ಟುಕಥೆಗಳು: ಲಾಠಿಚಾರ್ಜ್ ಪ್ರಮಾದ ಮುಚ್ಚಿ ಹಾಕುವ ಪಿತೂರಿ: ಪಾಪ್ಯುಲರ್ ಫ್ರಂಟ್ ಆರೋಪ - Mahanayaka
8:22 AM Saturday 21 - September 2024

ಉಪ್ಪಿನಂಗಡಿ ಪೊಲೀಸರ ಕಟ್ಟುಕಥೆಗಳು: ಲಾಠಿಚಾರ್ಜ್ ಪ್ರಮಾದ ಮುಚ್ಚಿ ಹಾಕುವ ಪಿತೂರಿ: ಪಾಪ್ಯುಲರ್ ಫ್ರಂಟ್ ಆರೋಪ

pfi press meet
16/12/2021

ಮಂಗಳೂರು: ಅಮಾಯಕರ ಬಿಡುಗಡೆಗೆ ಆಗ್ರಹಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣಾ ಪೊಲೀಸರು ಕಟ್ಟುಕಥೆಗಳನ್ನು ಸೃಷ್ಟಿಸಿ ಹರಿಯಬಿಡುತ್ತಿದ್ದು, ಇದು ಬರ್ಬರ ಲಾಠಿಚಾರ್ಜ್ ಪ್ರಮಾದವನ್ನು ಮುಚ್ಚಿ ಹಾಕುವ ಪಿತೂರಿಯಾಗಿದೆ ಎಂದು  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ.ಕ. ಜಿಲ್ಲಾ ಸಮಿತಿ ಆರೋಪಿಸಿದೆ.

ಈ ಸಂಬಂಧ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಿಎಫ್ ಐ ಮುಖಂಡರು, ಉಪ್ಪಿನಂಗಡಿ ಪೊಲೀಸ್ ಠಾಣಾ ಮುಂಭಾಗದಲ್ಲಿ ಡಿ.14ರಂದು ನಡೆದ ಪ್ರತಿಭಟನೆಯ ವೇಳೆ ಪೊಲೀಸರ ಮೇಲೆ ಹಲ್ಲೆ, ಠಾಣೆಯ ಮೇಲೆ ಕಲ್ಲೆಸೆತ, ಆ್ಯಂಬುಲೆನ್ಸ್ ನಲ್ಲಿ ಮಾರಕಾಯುಧ ಸಾಗಾಟ, ಗಲಭೆ ಪಿತೂರಿ, ಪೊಲೀಸ್ ಜೀಪ್ ಗೆ ಹಾನಿ ಮೊದಲಾದ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದವುಗಳು. ಪೊಲೀಸ್ ಲಾಠಿಚಾರ್ಜ್ ನಡೆಸಿದ ಬಳಿಕವೂ ಪೊಲೀಸ್ ಇನ್ಸ್ ಪೆಕ್ಟರ್ ಪ್ರಸನ್ನ ಕುಮಾರ್ ಠಾಣೆಯ ಮುಂಭಾಗದಲ್ಲಿ ನಿಂತಿರುವುದು ಕಂಡುಬರುತ್ತದೆ. ಆ ವೇಳೆ ಅವರ ಕೈಯಲ್ಲಿ ಯಾವುದೇ ಗಾಯದ ಗುರುತಾಗಲೀ, ಬ್ಯಾಂಡೇಜ್ ಕಟ್ಟಿದ ಕುರುಹು ಆಗಲೀ ಕಂಡುಬರುವುದಿಲ್ಲ. ಲಾಠಿ ಚಾರ್ಜ್ ನಡೆದು ಜನರು ಚದುರಿ ಹೋಗುವವರೆಗೂ ಪೊಲೀಸರ ಮೇಲೆ ದಾಳಿ ನಡೆಸಿದ ಬಗ್ಗೆ ಯಾವುದೇ ಸುದ್ದಿಗಳು ಬಂದಿರಲಿಲ್ಲ. ಆದರೆ ಬರ್ಬರ ಲಾಠಿಚಾರ್ಜ್ ನಿಂದ ಪ್ರತಿಭಟನಕಾರರು ಗಂಭೀರ ಗಾಯಗೊಂಡ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾದ ಬಳಿಕವಷ್ಟೇ ಈ ಆರೋಪಗಳು ಕೇಳಿ ಬಂದವು. ನಂತರ ದಾಖಲಿಸಲಾದ ಎಫ್.ಐ.ಆರ್ ಗಳಲ್ಲಿ ಒಂದೊಂದೇ ಆರೋಪಗಳನ್ನು ಸೇರಿಸಲಾಯಿತು ಎಂದು ಆರೋಪಿಸಿದರು.

ಈಗಾಗಲೇ ಪೊಲೀಸ್ ಠಾಣೆ ಮತ್ತು ಸುತ್ತಮುತ್ತಲ ಕಟ್ಟಡಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಮತ್ತು ಹಾರ್ಡ್ ಡಿಸ್ಕ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ಪ್ರತಿಭಟನಕಾರರು ದಾಳಿ ನಡೆಸುವ ದೃಶ್ಯಗಳಿದ್ದರೆ ಇನ್ನು ಕೂಡ ಯಾಕಾಗಿ ಬಹಿರಂಗಪಡಿಸಿಲ್ಲ? ಇಡೀ ದಿನ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಕಾರರು ಶಾಂತಿಯುತವಾಗಿ ವರ್ತಿಸಿದ್ದರು ಮತ್ತು ಯಾವುದೇ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿರಲಿಲ್ಲ. ಪ್ರತಿಭಟನಕಾರರು ನಾಯಕರ ಸೂಚನೆಯನ್ನು ಪಾಲಿಸುತ್ತಾ ಸಂಯಮದೊಂದಿಗೆ ವರ್ತಿಸುತ್ತಾ, ಬೇಡಿಕೆ ಈಡೇರಿಸುವಂತೆ ಘೋಷಣೆಗಳನ್ನಷ್ಟೇ ಕೂಗಿದ್ದರು. ಇದಕ್ಕೆ ವೀಡಿಯೋ ದೃಶ್ಯಾವಳಿಗಳೇ ಸಾಕ್ಷಿಯಾಗಿವೆ. ಘಟನೆಯ ದಿನದಂದು ಸಂಘಟನೆಯ ಜಿಲ್ಲಾ ನಾಯಕರು ಡಿವೈಎಸ್ಪಿ ಅವರೊಂದಿಗೆ ರಾತ್ರಿ 1 ಗಂಟೆಯ ವರೆಗೆ ನಿರಂತರ ಮಾತುಕತೆ ನಡೆಸುತ್ತಿದ್ದಾಗಲೂ ಈ ಹುಸಿ ಆರೋಪಗಳ ವಿಚಾರವೇ ಕೇಳಿ ಬಂದಿರಲಿಲ್ಲ.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೂ ತಮ್ಮ ಪತ್ರಿಕಾಗೋಷ್ಠಿಯಲ್ಲಿ ನಾಲ್ಕು ಮಂದಿ ಸಿಬ್ಬಂದಿಗಳು ಗಾಯಗೊಂಡಿದ್ದಾರಷ್ಟೇ ಎಂದು ಹೇಳಿಕೆ ನೀಡಿದ್ದಾರೆ ಹೊರತು ಇತರ ಘಟನೆಗಳ ಬಗ್ಗೆ ಎಲ್ಲೂ ಪ್ರಸ್ತಾಪಿಸಿಲ್ಲ. ಮಂಗಳೂರಿನಲ್ಲಿ ನಡೆದ ಎನ್.ಆರ್.ಸಿ ಪ್ರತಿಭಟನೆಯ ವೇಳೆಯೂ ಪೊಲೀಸರು ತಮ್ಮ ಪ್ರಮಾದಗಳನ್ನು ಮುಚ್ಚಿ ಹಾಕಲು ಹಲವು ಕಟ್ಟು ಕಥೆಗಳನ್ನು ಕಟ್ಟಿದ್ದರು. ನಂತರದಲ್ಲಿ ಅದರ ವಾಸ್ತವಾಂಶಗಳು ಬಯಲಾಗಿದ್ದವು. ಇದು ಇಡೀ ಪೊಲೀಸ್ ಇಲಾಖೆಯ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತೆ ಮಾಡಿತ್ತು ಎಂದು ಪಿಎಫ್ ಐ ಮುಖಂಡರು ಹೇಳಿದರು.


Provided by

ಪೊಲೀಸರು ಇದೀಗ ಉಪ್ಪಿನಂಗಡಿ ಘಟನೆಯಲ್ಲಿ ತಮ್ಮ ಗಂಭೀರ ಪ್ರಮಾದವನ್ನು ಮುಚ್ಚಿಹಾಕಲು ಈ ರೀತಿಯ ಕಟ್ಟುಕಥೆಗಳನ್ನು ಹರಡುತ್ತಿರುವುದು ಸಮ್ಮತಾರ್ಹವಲ್ಲ. ಪ್ರತಿಭಟನಕಾರರು ಶಾಂತಿ ಕದಡುವ ಪ್ರಯತ್ನ ಮಾಡಿದ್ದರೇ, ಅದರ ಬಗ್ಗೆ ಸಾಕ್ಷ್ಯಗಳನ್ನು ಬಿಡುಗಡೆ ಮಾಡಲಿ ಹೊರತು ಸಾರ್ವಜನಿಕರ ದಿಕ್ಕು ತಪ್ಪಿಸಲು ಯತ್ನಿಸುವುದು ಸರಿಯಲ್ಲ. ಸಂಘಟನೆಯ ನಾಯಕರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿರುವಾಗ, ಏಕಾಏಕಿ ಪೊಲೀಸರು ನಡೆಸಿದ ಲಾಠಿಚಾರ್ಜ್ ಹಲವಾರು ಪ್ರತಿಭಟನಕಾರರು ಗಾಯಗೊಳ್ಳಲು ಕಾರಣವಾಯಿತು. ಪೊಲೀಸರು ಸುಳ್ಳು ಸುದ್ದಿ ಹರಡದೇ ತಮ್ಮ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪಾಪ್ಯುಲರ್ ಫ್ರಂಟ್ ಈ ನೆಲದ ಕಾನೂನಿನ ಮೇಲೆ ಗೌರವವಿರಿಸಿರುವ ಸಂಘಟನೆಯಾಗಿದೆ ಮತ್ತು ತನ್ನ ವಿರುದ್ಧದ ಆರೋಪಗಳನ್ನು ಪ್ರಜಾಸತ್ತಾತ್ಮಕವಾಗಿ ಮತ್ತು ಕಾನೂನುಬದ್ಧವಾಗಿಯೇ ಎದುರಿಸಲಿದೆ ಎಂದು ಮತ್ತೊಮ್ಮೆ ಪುನರುಚ್ಚರಿಸುತ್ತದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪಾಪ್ಯುಲರ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ಪಾಪ್ಯುಲರ್ ಫ್ರಂಟ್ ದ.ಕ.ಜಿಲ್ಲಾ ಅಧ್ಯಕ್ಷ ಇಜಾಝ್ ಅಹ್ಮದ್, ಪಾಪ್ಯುಲರ್ ಫ್ರಂಟ್ ಮಂಗಳೂರು ನಗರ ಅಧ್ಯಕ್ಷ ಖಾದರ್ ಕುಳಾಯಿ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೊಟ್ಟೆ ವಿತರಣೆ ಕೈಬಿಡಿ, ಇಲ್ಲವೇ ಪ್ರತ್ಯೇಕ ವೆಜ್- ನಾನ್ ವೆಜ್ ಶಾಲೆ ತೆರೆಯಿರಿ | ದಯಾನಂದ ಸ್ವಾಮೀಜಿ ಒತ್ತಾಯ

ಬಿಜೆಪಿಯವ್ರು ಮಂಚ ಮುರಿಯೋದು, ತೋರಿಸ್ ಬ್ಯಾಡ್ರೀ ಅಂತ ಸ್ಟೇ ತರೋದು | ಸಿಎಂ ಇಬ್ರಾಹಿಂ ವ್ಯಂಗ್ಯ

ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲಿಸುವುದಿಲ್ಲ | ಹೆಚ್.ಡಿ.ಕುಮಾರಸ್ವಾಮಿ

ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 18ರಿಂದ 21ಕ್ಕೆ ಏರಿಸಲು ಕೇಂದ್ರ ಸಂಪುಟ ಅನುಮೋದನೆ

ಡಾನ್ಸ್ ಮಾಡುತ್ತಿದ್ದ ಮಹಿಳಾ ಕಾರ್ಯಕರ್ತೆಯರ ಮೇಲೆ ನೋಟು ಎಸೆದ ಕಾಂಗ್ರೆಸ್ ಕಾರ್ಯಕರ್ತರು | ವಿಡಿಯೋ ವೈರಲ್

ಯುವ ಸಾಮಾಜಿಕ ಹೋರಾಟಗಾರ್ತಿ ನೇಮಿಚಂದ್ರ ನಿಧನ

 

ಇತ್ತೀಚಿನ ಸುದ್ದಿ