ಸರಪಂಚ್ ಕೊಲೆ ಪ್ರಕರಣ: ಬಾಂಬೆ ಹೈಕೋರ್ಟಲ್ಲಿ ಪಿಐಎಲ್ ಸಲ್ಲಿಕೆ

29/01/2025

ಬೀಡ್ ಸರಪಂಚ್ ಕೊಲೆ ಪ್ರಕರಣದ ಕುರಿತು ನಡೆಯುತ್ತಿರುವ ತನಿಖೆಯನ್ನು ಮೇಲ್ವಿಚಾರಣೆ ಮಾಡುವಂತೆ ಕೋರಿ ಬಾಂಬೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್) ಸಲ್ಲಿಸಲಾಗಿದೆ.

ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸುತ್ತಿದೆ.
ಈ ಕುರಿತು ಪಿಐಎಲ್ ಸಲ್ಲಿಸಿದ ಸಾಮಾಜಿಕ ಕಾರ್ಯಕರ್ತ ಕೇತನ್ ತಿರೋಡ್ಕರ್, ಪ್ರಕರಣದ ನಿಯತಕಾಲಿಕ ಪ್ರಗತಿ ವರದಿಯನ್ನು ಸಲ್ಲಿಸಲು ಎಸ್ಐಟಿಗೆ ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

ಕೊಲೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆಯನ್ನು ಊಹಿಸಿರುವ ಅರ್ಜಿಯಲ್ಲಿ, ತನಿಖೆಯನ್ನು ಪ್ರಾರಂಭಿಸಲು ಜಾರಿ ನಿರ್ದೇಶನಾಲಯಕ್ಕೆ (ಇಡಿ) ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಲಾಗಿದೆ.

ಈ ಮಧ್ಯೆ ಕ್ಯಾಬಿನೆಟ್ ಸಚಿವ ಧನಂಜಯ್ ಮುಂಡೆ ಸಲ್ಲಿಸಿದ ಅಫಿಡವಿಟ್ ಅನ್ನು ಪರಿಶೀಲಿಸಲು ಮತ್ತು ಕಾನೂನಿನ ಪ್ರಕಾರ ಕಾರ್ಯನಿರ್ವಹಿಸಲು ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಲಾಗಿದೆ. ಅವರು ಅನೇಕ ಕಂಪನಿಗಳ ನಿರ್ದೇಶಕರಾಗಿರುವ ಬಗ್ಗೆ ತಮ್ಮ ಅಫಿಡವಿಟ್ ನಲ್ಲಿ ಬಹಿರಂಗಪಡಿಸಿಲ್ಲ ಎಂದು ಅವರ ವಿರುದ್ಧದ ಅರ್ಜಿಯಲ್ಲಿ ಹೇಳಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version