ಅಗ್ನಿವೀರ್, ಅಲ್ಪಸಂಖ್ಯಾತರ ಬಗ್ಗೆ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಹೇಳಿಕೆ: ‘ವಿವಾದ’ ದ ಕಿಡಿ ಹೊತ್ತಿಸಿದ ಬಿಜೆಪಿ
![](https://www.mahanayaka.in/wp-content/uploads/2024/07/af10ced5b4f259ad9878d2d6c3e7b48db62fde5c5c707a016f3b5d5ab6e858bf.0.jpg)
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ, ಅವರ ಕೆಲವು ಹೇಳಿಕೆಗಳನ್ನು ಸಂಸತ್ತಿನಿಂದ ತೆಗೆದುಹಾಕಲಾಗಿದೆ.
ಆಡಳಿತಾರೂಢ ಪಕ್ಷದ ನಾಯಕರು ಜನರನ್ನು ಕೋಮು ಆಧಾರದ ಮೇಲೆ ವಿಭಜಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದರು. ಅಲ್ಲದೇ ಹಿಂಸೆಯಲ್ಲಿ ತೊಡಗಿದ್ದಾರೆಂದು ಹೇಳಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿಯವರನ್ನು ತರಾಟೆಗೆ ತೆಗೆದುಕೊಂಡಿದ್ದರು.
ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಿದ್ದರು.
ಕುರಾನ್ ನಿರ್ಭಯತೆಯ ಬಗ್ಗೆ ಮಾತನಾಡುತ್ತದೆ ಎಂದು ಎತ್ತಿ ತೋರಿಸಲು ರಾಹುಲ್ ಗಾಂಧಿ ಅವರು ಪ್ರವಾದಿ ಮುಹಮ್ಮದ್ ಅವರನ್ನು ಉಲ್ಲೇಖಿಸಿದ್ದರು.
ಶಿವ, ಗುರುನಾನಕ್ ಮತ್ತು ಯೇಸುಕ್ರಿಸ್ತನ ಚಿತ್ರಗಳನ್ನು ಹಿಡಿದುಕೊಂಡು ಅವರು ಹಿಂದೂ ಧರ್ಮ, ಇಸ್ಲಾಂ, ಸಿಖ್ ಧರ್ಮ, ಕ್ರಿಶ್ಚಿಯನ್ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳನ್ನು ಉಲ್ಲೇಖಿಸಿ ನಿರ್ಭಯತೆಯ ಮಹತ್ವವನ್ನು ಒತ್ತಿ ಹೇಳಿದ್ದರು. ಭಗವಾನ್ ಶಿವನ ಗುಣಲಕ್ಷಣಗಳು ಮತ್ತು ಗುರುನಾನಕ್, ಯೇಸು ಕ್ರಿಸ್ತ, ಬುದ್ಧ ಮತ್ತು ಮಹಾವೀರರ ಬೋಧನೆಗಳನ್ನು ಉಲ್ಲೇಖಿಸಿದ ಅವರು, ಎಲ್ಲಾ ಧರ್ಮಗಳು ಮತ್ತು ಮಹಾನ್ ವ್ಯಕ್ತಿಗಳು “ಭಯಪಡಬೇಡಿ, ಇತರರನ್ನು ಹೆದರಿಸಬೇಡಿ” ಎಂದು ಹೇಳುತ್ತಾರೆ ಎಂದು ಹೇಳಿದ್ದರು. ಇದು ಬಿಜೆಪಿ ನಾಯಕರ ಪ್ರತಿಕ್ರಿಯೆಗೆ ಕಾರಣವಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth