ರಾಜಸ್ಥಾನದಲ್ಲಿ ಕೈಗೆ ಪೆಟ್ಟು ನೀಡಲು ಕಮಲ ರೆಡಿಯಂತೆ: ಜೈಪುರಕ್ಕೆ ಭೇಟಿ ನೀಡಿದ ವೇಳೆ ಜೋಶಿ ಹೇಳಿದ್ದೇನು..? - Mahanayaka
7:35 PM Friday 20 - September 2024

ರಾಜಸ್ಥಾನದಲ್ಲಿ ಕೈಗೆ ಪೆಟ್ಟು ನೀಡಲು ಕಮಲ ರೆಡಿಯಂತೆ: ಜೈಪುರಕ್ಕೆ ಭೇಟಿ ನೀಡಿದ ವೇಳೆ ಜೋಶಿ ಹೇಳಿದ್ದೇನು..?

14/07/2023

ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವು ಸಂಪೂರ್ಣ ಕೃಷಿ ಮನ್ನಾ ಸೇರಿದಂತೆ ಚುನಾವಣಾ ಪೂರ್ವ ಭರವಸೆಗಳನ್ನು ಈಡೇರಿಸಿಲ್ಲ ಎಂದು ರಾಜಸ್ಥಾನದ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಮುಂಬರುವ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದಿಂದ ಗೆಲ್ಲುತ್ತದೆ ಎಂದಿದ್ದಾರೆ. ಬಿಜೆಪಿ ಈ ಬಾರಿ ರಾಜಸ್ಥಾನದಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಸರ್ಕಾರವನ್ನು ರಚಿಸುತ್ತದೆ ಎಂದು ನಾನು ಸಂಪೂರ್ಣ ಭರವಸೆ ಮತ್ತು ವಿಶ್ವಾಸದಿಂದ ಹೇಳುತ್ತೇನೆ ಎಂದು ರಾಜಸ್ಥಾನದ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಜೈಪುರಕ್ಕೆ ಭೇಟಿ ನೀಡಿದ ವೇಳೆ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಿಳಾ ದೌರ್ಜನ್ಯದ ಘಟನೆಗಳು ಹೆಚ್ಚಾಗಿವೆ ಮತ್ತು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಎಂದು ಅವರು ಆರೋಪಿಸಿದ್ದಾರೆ.


Provided by

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸುಳ್ಳು ಹೇಳುವುದು ಬಹಳ ಸುಲಭವಾಗಿದೆ. ಇದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ. ಇಡೀ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಎಂಬುದೇ ಇಲ್ಲ. ನಾವು ಮಹಿಳೆಯರ ಅಭದ್ರತೆಯ ಬಗ್ಗೆ ಮಾತನಾಡಿದರೆ, ಇಡೀ ದೇಶದಲ್ಲಿ ರಾಜಸ್ಥಾನ ಅಗ್ರಸ್ಥಾನದಲ್ಲಿದೆ. ಈ ಎಲ್ಲಾ ವಿಚಾರಗಳನ್ನು ಬಿಜೆಪಿ ತನ್ನ ಪ್ರಚಾರದ ವೇಳೆ ಬಿಂಬಿಸಲಿದೆ ಎಂದು ಸಚಿವರು ಹೇಳಿದರು.

ಬಿಜೆಪಿಯ ರಾಜಸ್ಥಾನ ಘಟಕವು ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಪ್ರಾರಂಭಿಸಿದೆ. ಇದೇ ವೇಳೆ ಜನರಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ನಡೆದ ಪ್ರತಿಭಟನೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಎಲ್ಲಾ ವಿಷಯಗಳನ್ನು ಇನ್ನಷ್ಟು ವ್ಯವಸ್ಥಿತವಾಗಿ ಜನರ ಮಧ್ಯೆ ಕೊಂಡೊಯ್ಯುತ್ತೇವೆ ಎಂದರು.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ