ವಿಧಾನಸಭೆಯ ಅಧಿವೇಶನದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಚರ್ಚಿಸಿ ಹಿಂಪಡೆಯದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ: ಕ್ಯಾಂಪಸ್ ಫ್ರಂಟ್ - Mahanayaka

ವಿಧಾನಸಭೆಯ ಅಧಿವೇಶನದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಚರ್ಚಿಸಿ ಹಿಂಪಡೆಯದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ: ಕ್ಯಾಂಪಸ್ ಫ್ರಂಟ್

c f i bangalore
11/09/2021

ಬೆಂಗಳೂರು: ಸೆ.13 ಸೋಮವಾರದಿಂದ ಆರಂಭಗೊಳ್ಳಲಿರುವ ವಿಧಾನಸಭೆಯ ಅಧಿವೇಶನದಲ್ಲಿ ಪ್ರಸ್ತುತತೆಯ ಹಲವಾರು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದ್ದು, ಇದರಲ್ಲಿ ತರಾತುರಿಯಲ್ಲಿ ಜಾರಿಗೊಳಿಸಲಾದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಹ ಮುಕ್ತವಾಗಿ ಚರ್ಚಿಸಿ ಹಿಂಪಡೆಯಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಗ್ರಹಿಸಿದೆ.

ಮೂರು ದಶಕಗಳ ನಂತರ ಜಾರಿಗೊಳಿಸಲು ಉದ್ದೇಶಿಸಿರುವ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಹೊಸ ಬದಲಾವಣೆಯ ನಿರೀಕ್ಷೆಯಲ್ಲಿದ್ದರು, ಆದರೆ ಈ ನಿರೀಕ್ಷೆಗೆ ತದ್ವಿರುದ್ದವಾಗಿ ವಾಸ್ತವ್ಯತೆಯಿಲ್ಲದ ಜನರನ್ನು ಕನಸಿನ ಲೋಕದಲ್ಲಿ ತೇಲಾಡಿಸುವ ಅಸಮರ್ಪಕ ಹಾಗೂ ಅವೈಜ್ಞಾನಿಕವಾದ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗುವ ರೀತಿಯಲ್ಲಿ ಕ್ಯಾಬಿನೆಟ್ ಸಭೆ ಕರೆದು ಲೋಕಸಭೆಯಲ್ಲಾಗಲಿ, ವಿಧಾನಸಭೆಯಲ್ಲಾಗಲಿ ಚರ್ಚೆಗೆ ಒಳಪಡಿಸದೆ ಹಿಂಬದಿ ಬಾಗಿಲಿನ ಮುಖಾಂತರ ಜಾರಿಗೊಳಿಸಿರುವುದರ ಹಿಂದಿರುವ ದುರುದ್ದೇಶವನ್ನು ಕ್ಯಾಂಪಸ್ ಫ್ರಂಟ್ ಅರಿತಿದೆ ಎಂದು ಸಮಿತಿಯು ಹೇಳಿದೆ.

ಈ ನೀತಿಯು ಶಿಕ್ಷಣವನ್ನು ಕೇಂದ್ರೀಕರಿಸುವುದರೊಂದಿಗೆ ಖಾಸಗೀಕರಣಕ್ಕೆ ಒತ್ತು ನೀಡುವ ಹಾಗೂ ಶಿಕ್ಷಣವನ್ನು ಕೇಸರೀಕರಣಗೊಳಿಸುವ ಹುನ್ನಾರಹೊಂದಿದೆ. 2016 ರಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸುಗೊಳಿಸಿದ ಸುಭ್ರಮಣಿಯನ್ ನೇತೃತ್ವದ ಸಮಿತಿಯ ವರದಿಯನ್ನು ಯಾಕಾಗಿ ಸಾರ್ವಜನಿಕಗೊಳಿಸಲಿಲ್ಲ ಹಾಗೂ ಅವರ ವರದಿಯ ಅಭಿಪ್ರಾಯಗಳನ್ನು ಯಾಕಾಗಿ ಪರಿಗಣಿಸಲಿಲ್ಲ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆಯಿಲ್ಲ, ತದನಂತರ ಕಸ್ತೂರಿ ರಂಗನ್ ರವರ ನೇತೃತ್ವದಲ್ಲಿ ರೂಪಿಸಲಾದ ನೀತಿಯಲ್ಲಿರುವ ತೊಡಕುಗಳ ಕುರಿತು 2019 ರಲ್ಲಿಯೇ ಕ್ಯಾಂಪಸ್ ಫ್ರಂಟ್ ವಿರೋಧ ವ್ಯಕ್ತಪಡಿಸಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃಧ್ದಿ ಸಚಿವಾಲಯಕ್ಕೆ ಶಿಫಾರಸ್ಸು ವರದಿ ನೀಡಿತ್ತು. ಆದರೆ ನಮ್ಮ ಹಾಗೂ ಹಲವಾರು ಶಿಕ್ಷಣ ತಜ್ಞರು ನೀಡಿದ ಯಾವ ಅಭಿಪ್ರಾಯಗಳನ್ನು ಸಹ ಪರಿಗಣಿಸದೆ ಸರ್ವಾಧಿಕಾರಿಯಾಗಿ ಕೈಗೊಂಡ ತೀರ್ಮಾನವಾಗಿದೆ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ, ಈ ನೀತಿಯನ್ನು ಜುಲೈ 29 , 2020 ರಲ್ಲಿ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು ಜಾರಿಗೊಳಿಸುವುದರ ಕುರಿತು ಕೇಂದ್ರ ಸರ್ಕಾರ ಹೇಳಿಕೆ ನೀಡಿತ್ತು.

ಈ ನೀತಿಯು ಪ್ರಾದೇಶಿಕತೆಗೆ ಹಾಗೂ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವ ಹುನ್ನಾರವನ್ನರಿತ  ತಮಿಳುನಾಡು ಸರ್ಕಾರ ಸಂಪೂರ್ಣವಾಗಿ ತಿರಸ್ಕರಿಸಿದೆ ಹಾಗೂ ಕೇರಳ ಸರ್ಕಾರವು ಇದರ ವಿರುಧ್ದ ಅಭಿಪ್ರಾಯದ ಶಿಫಾರಸ್ಸು ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದೆ ಅದಲ್ಲದೆ ಪಶ್ಚಿಮ ಬಂಗಾಳ ಸರ್ಕಾರವು ತಮ್ಮ ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದೆ ಇದರೊಂದಿಗೆ ದೆಹಲಿಯ ಉಪನ್ಯಾಸಕರು ಕೂಡ ಇದರ ವಿರುದ್ದ ಪ್ರತಿಭಟಿಸಿದ್ದಾರೆ.

ಇಂತಹ ಗೊಂದಲದ ಗೂಡಾಗಿರುವ ಈ ನೀತಿಯನ್ನು ಇದೀಗ ಕರ್ನಾಟಕದಲ್ಲಿ ಯಾವುದೇ ಚರ್ಚೆ ನಡೆಸದೆ ಜಾರಿಗೊಳಿಸಿರುವುದು ಖಂಡನೀಯ. ಇದೀಗಾಗಲೇ ಕರ್ನಾಟಕದಲ್ಲಿ ಇದರ ವಿರುಧ್ದ ಹಲವಾರು ಹೋರಾಟಗಳು ನಡೆಯುತ್ತಿದ್ದು, ವಿರೋಧ ಪಕ್ಷಗಳು ಕೂಡ ವಿರೋಧ ವ್ಯಕ್ತಪಡಿಸಿದೆ.

ಪ್ರಾರಂಭದಿಂದಲೂ ಈ ಶಿಕ್ಷಣ ನೀತಿಯಿಂದಿರುವ ಅಪಾಯ ಮತ್ತು ಸಮಸ್ಯೆಗಳ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುತ್ತ, ಇದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿ ಸ್ಥಳೀಯ ಅಧಿಕಾರಿಗಳ ಮೂಲಕ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಇದನ್ನು ಜಾರಿಗೊಳಿಸಬಾರದೆಂದು ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ರವರಿಗೆ ಮನವಿ ಸಲ್ಲಿಸಿ, ರಾಜ್ಯಾದ್ಯಂತ ಭಿತ್ತಿ ಪತ್ರ ಪ್ರದರ್ಶನ ಮಾಡಿ, ದೊಡ್ಡ ಮಟ್ಟದ ಪ್ರತಿಭಟನೆ ಸಹ ಹಮ್ಮಿಕೊಂಡು, ಶಿಕ್ಷಣ ಸಚಿವರ ಕಚೇರಿಗೆ ಮುತ್ತಿಗೆ ಹಾಕಿ, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಣ ಸಚಿವರು ಹಾಜರಾಗಿದ್ದ NEP-2020 ರ ಉದ್ಘಾಟನಾ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಿ ಕ್ಯಾಂಪಸ್ ಫ್ರಂಟ್ ಪ್ರತಿಭಟಿಸಿತ್ತು, ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ನಮ್ಮ ಆರೋಪಗಳು ಸುಳ್ಳು, ವಿರೋಧಿಸುವವರು ಚರ್ಚೆಗೆ ಬನ್ನಿ ಎಂಬ ಹೇಳಿಕೆ ನೀಡಿದ್ದರು, ಕ್ಯಾಂಪಸ್ ಫ್ರಂಟ್ ಸಚಿವರ ಸವಾಲನ್ನು ಸ್ವೀಕರಿಸಿ ರಾಜ್ಯಾದ್ಯಂದ ಭಿತ್ತಿ ಪತ್ರ ಪ್ರದರ್ಶಿಸಿ ಚರ್ಚೆಗೆ ಸಿದ್ಧವಿದೆ ಎಂಬ ಸಂದೇಶ ನೀಡಿ, ಸಾಮಾಜಿಕ ಜಾಲತಾಣಗಳ ಮತ್ತು ಮಾಧ್ಯಮಗಳ ಮುಖಾಂತರ ಸಚಿವರನ್ನು ಬಹಿರಂಗ ಚರ್ಚೆಗೆ ಸಹ ಆಹ್ವಾನಿಸಿತ್ತು.

ಸದ್ಯಕ್ಕೆ ಇದರ ಕುರಿತು ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗುತ್ತಿದ್ದರೂ ಹಠಮಾರಿ ಧೋರಣೆಯೊಂದಿಗೆ ಉನ್ನತ ಶಿಕ್ಷಣದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಿದ್ದಾರೆ. ರಾಜ್ಯ ಸರಕಾರದ ಈ ಸರ್ವಾಧಿಕಾರದ ನಡೆಯನ್ನು ಕ್ಯಾಂಪಸ್ ಫ್ರಂಟ್ ಎಲ್ಲಾ ರೀತಿಯಲ್ಲೂ ಪ್ರತಿರೋಧಿಸಲಿದೆ, ಒಂದು ವೇಳೆ ಈ ಸೋಮವಾರದಿಂದ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಇದರ ಕುರಿತು ಚರ್ಚೆ ನಡೆಸಿ ವಿಧಾನಸಭೆಯಲ್ಲಿ ಚರ್ಚಿಸಿ ಈ ನೀತಿಯನ್ನು ಹಿಂಪಡೆಯದಿದ್ದರೆ ವಿದ್ಯಾರ್ಥಿ ಸಮೂಹವನ್ನು ಒಗ್ಗೂಡಿಸಿ ವಿಧಾನಸೌಧಕ್ಕೆ ಕ್ಯಾಂಪಸ್ ಫ್ರಂಟ್ ಮುತ್ತಿಗೆ ಹಾಕಲಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ  ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ, ರಾಜ್ಯ ಕಾರ್ಯದರ್ಶಿ ಸರ್ಫರಾಝ್ ಗಂಗಾವತಿ, ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ, ಸದಸ್ಯ ಹುಸೇನ್ ಬಾಶಾ ಕೊಪ್ಪಳ, ಆಕಿಬ್ ಬೆಂಗಳೂರು ಉಪಸ್ಥಿತರಿದ್ದರು.

ಇನ್ನಷ್ಟು ಸುದ್ದಿಗಳು…

ಯಡಿಯೂರಪ್ಪ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಜರಾತ್ ಸಿಎಂ ವಿಜಯ್ ರೂಪಾನಿ!

ಇನ್ನು ನಾಲ್ಕು ವರ್ಷಗಳಲ್ಲಿ ಮನೆ ಮನೆಗಳಲ್ಲಿ ಆರೆಸ್ಸೆಸ್: ಮೋಹನ್ ಭಾಗವತ್

33 ತಾಸುಗಳ ಜೀವನ್ಮರಣ ಹೋರಾಟದ ಬಳಿಕ ಸಾವಿಗೀಡಾದ ಅತ್ಯಾಚಾರ ಸಂತ್ರಸ್ತೆ!

ಇಡೀ ತೋಟವನ್ನೇ ನಾಶ ಮಾಡಿದ ಆನೆ, ಪುಟ್ಟ ಹಕ್ಕಿ ಗೂಡು ಇದ್ದ ಬಾಳೆಗಿಡವನ್ನು ಬಿಟ್ಟು ಹೋಯಿತು!

ಬಿಜೆಪಿ ಆಡಳಿತದಲ್ಲಿಯೇ ದೇವಸ್ಥಾನ ನೆಲಸಮ: ಬೇರೆ ಸರ್ಕಾರ ಇದ್ದಿದ್ದರೆ ನಡೆಯುತ್ತಿದ್ದದ್ದೇ ಬೇರೆ!

ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಿರುವ ಪ್ರಿಯಾಂಕ ಟಿಬ್ರೆವಾಲ್ ಹಿನ್ನೆಲೆ ಏನು ಗೊತ್ತೆ?

ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಲಾರಿ: 6 ಮಂದಿ ಸಾವು, ಇಬ್ಬರಿಗೆ ಗಂಭೀರ ಗಾಯ

ಇತ್ತೀಚಿನ ಸುದ್ದಿ