ಸಚಿವ ಈಶ್ವರಪ್ಪ ಭಾವಚಿತ್ರಕ್ಕೆ ಬಿಜೆಪಿ ಮುಖಂಡರಿಂದ ಹಾಲಿನ ಅಭಿಷೇಕ - Mahanayaka
10:15 AM Wednesday 5 - February 2025

ಸಚಿವ ಈಶ್ವರಪ್ಪ ಭಾವಚಿತ್ರಕ್ಕೆ ಬಿಜೆಪಿ ಮುಖಂಡರಿಂದ ಹಾಲಿನ ಅಭಿಷೇಕ

ewarappa
19/02/2022

ಮೈಸೂರು: ಸಚಿವ ಈಶ್ವರಪ್ಪ ಭಾವಚಿತ್ರಕ್ಕೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಬಿಜೆಪಿ ಮುಖಂಡರು ಹಾಲಿನ ಅಭಿಷೇಕ ಮಾಡಿರುವ ಬಗ್ಗೆ ವರದಿಯಾಗಿದೆ.

ಈ ವೇಳೆ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ತೋಟದಪ್ಪ ಬಸವರಾಜು, ಸಚಿವ ಈಶ್ವರಪ್ಪನವರು ಕಾಂಗ್ರೆಸ್ ಪಕ್ಷದವರಿಗೆ ದೇಶ ಪ್ರೇಮದ ಬಗ್ಗೆ ತಿಳಿಸಿದ್ದಾರೆ. ಹಿಂದೂ ಧರ್ಮದಲ್ಲಿ ಮಾತ್ರ ಜಾತ್ಯತೀತತೆ ಇರುವಂತದ್ದು. ಕಾಂಗ್ರೆಸ್ ಪಕ್ಷದವರೇ ಈ ದೇಶದ ದೇಶದ್ರೋಹಿಗಳು. ಡಿ.ಕೆ.ಶಿವಕುಮಾರ್‌ರಂತಹ ಭ್ರಷ್ಟ ರಾಜಕಾರಣಿ ಯಾರು ಇಲ್ಲ. ಈಶ್ವರಪ್ಪನವರು ಹೇಳಿರುವ ಹೇಳಿಕೆಗೆ ಸ್ವತಃ ಅವರೇ ಬದ್ಧ ಎಂದಿದ್ದಾರೆ.

ಈಶ್ವರಪ್ಪನವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ. ಅವರ ಪರವಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ನಿಲ್ಲಬೇಕು ಎಂದು ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಜಮ್ಮು ಕಾಶ್ಮಿರದಲ್ಲಿ ಗುಂಡಿನ ಚಕಮಕಿ: ಉಗ್ರನ ಹತ್ಯೆ; ಇಬ್ಬರು ಯೋಧರು ಹುತಾತ್ಮ

ದಲಿತ ಕುಟುಂಬಕ್ಕೆ, ನ್ಯಾಯಾಲಯಕ್ಕೆ ವಂಚನೆ: ವಕೀಲನಿಗೆ ಜೀವಾವಧಿ ಶಿಕ್ಷೆ

ಭಾರತೀಯ ವಧುವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಿಟನ್ ಅಧಿಕಾರಿ

ಫ್ಲ್ಯಾಟ್‌ ನೊಳಗೆ ಅರೆನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ: ದೂರು ದಾಖಲು

ಬಹು ನಿರೀಕ್ಷಿತ ‘ಜೇಮ್ಸ್’ ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್

 

ಇತ್ತೀಚಿನ ಸುದ್ದಿ