ಮಂಗಳೂರು: ಸಾಲದ ಬಾಧೆಯಿಂದ ಬೇಸತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ - Mahanayaka
7:14 PM Friday 20 - September 2024

ಮಂಗಳೂರು: ಸಾಲದ ಬಾಧೆಯಿಂದ ಬೇಸತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

death
27/12/2021

ಮಂಗಳೂರು: ಸಾಲದ ಬಾಧೆಯಿಂದ ಬೇಸತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದಲ್ಲಿ ವರದಿಯಾಗಿದೆ.

ಬಿಹಾರದ ಪಾಟ್ನಾ ಮೂಲದ ಸೌರವ್ ಕುಮಾರ್ ಯಾದವ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಂಗಳೂರು ಹೊರವಲಯದ ಸುರತ್ಕಲ್ ಎನ್ಐ ಟಿಕೆ ಕಾಲೇಜಿನಲ್ಲಿ ಇಲೆಕ್ಟ್ರಾನಿಕ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಸೌರಭ್, ತನ್ನ ಕೋಣೆಯಲ್ಲೇ ನೇಣು ಬಿಗಿದುಕೊಂಡಿದ್ದಾನೆ.

ಈತ ಡೆತ್​ ನೋಟ್​ ಬರೆದಿಟ್ಟಿದ್ದರಿಂದ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿದೆ. ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಸಾಲ ಪಡೆದಿದ್ದೆ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದೇನೆ ಎಂಬುದಾಗಿ ಡೆತ್​ನೋಟ್​ನಲ್ಲಿ ಬರೆದಿದ್ದ ಎನ್ನಲಾಗಿದೆ.


Provided by

ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

BSP ದ.ಕ.ಜಿಲ್ಲಾ ಮಟ್ಟದ ಪದಾಧಿಕಾರಿಗಳ ತರಬೇತಿ ಸಭೆ

ನೈಟ್ ಕರ್ಫ್ಯೂ ಆದೇಶ ಮರುಪರಿಶೀಲನೆ ಇಲ್ಲ: ಸಿಎಂ ಬೊಮ್ಮಾಯಿ

ಮೇಲ್ಜಾತಿಯ ಮಹಿಳೆ ತಯಾರಿಸಿದ ಆಹಾರ ನಾವು ಸೇವಿಸುವುದಿಲ್ಲ | ದಲಿತ ವಿದ್ಯಾರ್ಥಿಗಳಿಂದ ಪಟ್ಟು

ಸನ್ನಿ ಲಿಯೋನ್ ಮೇಲೆ ಅರ್ಚಕರ ಕೆಂಗಣ್ಣು: ಕ್ಷಮೆ ಕೇಳದಿದ್ದರೆ ಭಾರತದಲ್ಲಿರಲು ಬಿಡಲ್ಲ ಎಂದು ಬೆದರಿಕೆ

ಕರ್ನಾಟಕ ಬಂದ್ ನಡುವೆಯೇ ಇನ್ನೊಂದು ಶಾಕ್: ಡಿ.31ರಿಂದ ಕಸ ಗುತ್ತಿಗೆದಾರ ಸಂಘದಿಂದ ಅನಿರ್ದಿಷ್ಠಾವಧಿ ಮುಷ್ಕರ

ಅಭಿಮಾನಿಗಳಿಗೆ ಕೈಮುಗಿದು ಬೇಡಿಕೊಂಡ ನಿಖಿಲ್ ಕುಮಾರಸ್ವಾಮಿ | ಕಾರಣ ಏನು ಗೊತ್ತಾ?

ಇತ್ತೀಚಿನ ಸುದ್ದಿ