ಟಿಪ್ಪು ಸುಲ್ತಾನ್​ ಕಾಲದ ದೀವಟಿಗೆ ಸಲಾಂ ಪೂಜೆ ಪದ್ಧತಿಯ ಹೆಸರು ಬದಲಾವಣೆ - Mahanayaka

ಟಿಪ್ಪು ಸುಲ್ತಾನ್​ ಕಾಲದ ದೀವಟಿಗೆ ಸಲಾಂ ಪೂಜೆ ಪದ್ಧತಿಯ ಹೆಸರು ಬದಲಾವಣೆ

suryanarayana bhat
11/12/2022

ಟಿಪ್ಪು ಸುಲ್ತಾನ್​ ಕಾಲದ ದೀವಟಿಗೆ ಸಲಾಂ ಪೂಜೆ ಪದ್ಧತಿಯನ್ನು ನಿಲ್ಲಿಸುವಂತೆ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸುತ್ತೋಲೆ ಹೊರಡಿಸಿದೆ. ಟಿಪ್ಪು ರಾಜನಾಗಿದ್ದ ಕಾಲದಿಂದಲೂ ರಾಜ್ಯದ ಹಲವು ಪ್ರಸಿದ್ಧ ದೇವಾಲಯಗಳಲ್ಲಿ ದೀವಟಿಗೆ ಸಲಾಂ ಪೂಜೆ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಪುತ್ತೂರು ಮಹಾಲಿಂಗೇಶ್ವರ ದೇಗುಲಗಳಲ್ಲಿಯೂ ಈ ಪದ್ಧತಿ ಇತ್ತು. ಆದರೆ ಮುಂದಿನ ದಿನಗಳಲ್ಲಿ ಸಲಾಂ ಪೂಜೆ ನಡೆಸುವುದು ಬೇಡ. ಅದರ ಬದಲಿಗೆ ಸಂಧ್ಯಾಕಾಲದಲ್ಲಿ ದೀಪ ನಮಸ್ಕಾರ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆಗೆ ರಾಜ್ಯ ಸರ್ಕಾರ ಸೂಚಿಸಿದೆ.


Provided by

ರಾಜ, ಮಂತ್ರಿ, ಪ್ರಜೆಗಳ ಒಳಿತಿನ ಸಂಕಲ್ಪದೊಂದಿಗೆ ದೀಪ ನಮಸ್ಕಾರ ಪೂಜೆ ನಡೆಯಲಿದೆ. ಮುಜರಾಯಿ ಇಲಾಖೆಯ ಹೆಸರನ್ನೂ ರಾಜ್ಯ ಸರ್ಕಾರವು ಧರ್ಮಾದಾಯ ದತ್ತಿ ಇಲಾಖೆ ಎಂದು ಮರುನಾಮಕರಣ ಮಾಡಿದೆ. ಈ ಸಂಬಂಧ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಧಾರ್ಮಿಕ ಪರಿಷತ್ ಅಂತಿಮ ತೀರ್ಮಾನ ತೆಗೆದುಕೊಂಡಿದೆ. ‘ಸಲಾಂ ಆರತಿ’ ಬದಲಿಗೆ, ‘ಆರತಿ ನಮಸ್ಕಾರ’ ಹಾಗೂ ‘ಸಲಾಂ ಮಂಗಳಾರತಿ’ ಬದಲು ‘ಮಂಗಳಾರತಿ ನಮಸ್ಕಾರ’ ಎಂದು ಹೆಸರು ಬದಲಿಸಲಾಗಿದೆ. ಆದರೆ ದೇಗುಲಗಳಲ್ಲಿ ಸೇವೆಯು ಯಥಾವತ್ತು ಮುಂದುವರಿಯಲಿವೆ. ‘ಸಲಾಂ ಪದವು ಸಂಸ್ಕೃತ ಭಾಷೆಯದ್ದಲ್ಲ. ಹೀಗಾಗಿ ಉಳಿದೆಲ್ಲ ಸೇವೆಗಳಿಗೆ ಇರುವಂತೆ ಮಂಗಳಾರತಿಗೂ ಸಂಸ್ಕೃತದ ಪದವನ್ನೇ ಬಳಸಬೇಕು’ ಎಂಬ ಅಭಿಪ್ರಾಯವನ್ನು ಧಾರ್ಮಿಕ ಪರಿಷತ್ ಸದಸ್ಯರು ವ್ಯಕ್ತಪಡಿಸಿದ್ದರು.


Provided by

‘ಮುಜರಾಯಿ’ ಪದವನ್ನೂ ಕೈಬಿಡಬೇಕೆಂಬ ಒತ್ತಾಯ ಕೇಳಿಬಂದಿದೆ. ‘ಈ ಮೊದಲು ಮುಜರಾಯಿ ಹೆಸರಿನ ಬಳಕೆ ನಿಲ್ಲಿಸಲಾಗಿತ್ತು. ಅದನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು, ಧರ್ಮಾದಾಯ ದತ್ತಿ ಇಲಾಖೆ ಎಂದು ಕರೆಯಲು ನಿರ್ಧರಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಬೇಕು ಎಂದು ಪರಿಷತ್ ಸದಸ್ಯರು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ