ಸಂಭಾಲ್ ಹಿಂಸಾಚಾರ: ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

11/12/2024

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಬಲಿಯಾದವರ ಕುಟುಂಬಗಳನ್ನು ತಮ್ಮ 10 ಜನಪಥ್ ನಿವಾಸದಲ್ಲಿ ಭೇಟಿ ಮಾಡಿದರು ಮತ್ತು ಅವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಿದರು ಎಂದು ಮೂಲಗಳು ತಿಳಿಸಿವೆ.
ಈ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು.

ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಇಬ್ಬರೂ ಸಂಭಾಲ್ ಗೆ ಪ್ರಯಾಣಿಸಲು ಮತ್ತು ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ಉತ್ತರ ಪ್ರದೇಶ ಸರ್ಕಾರ ಈ ಹಿಂದೆ ಅನುಮತಿ ನಿರಾಕರಿಸಿತ್ತು.
ಗಾಂಧಿ ಸಹೋದರರು ಡಿಸೆಂಬರ್ 4 ರಂದು ಸಂಭಾಲ್ ಗೆ ತೆರಳುತ್ತಿದ್ದಾಗ ಗಾಜಿಪುರ ಗಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ತಡೆದರು. ರಾಹುಲ್ ಗಾಂಧಿ ಈ ಕ್ರಮವನ್ನು “ಸಂವಿಧಾನ ವಿರೋಧಿ” ಎಂದು ಕರೆದಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version