ಪೌರತ್ವ ತಿದ್ದುಪಡಿ ಕಾಯಿದೆಗೆ ತಡೆ ನೀಡಲು ಸುಪ್ರೀಂ ನಕಾರ: ಕೇಂದ್ರ ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ
ಪೌರತ್ವ ತಿದ್ದುಪಡಿ ಕಾಯಿದೆಗೆ ತಡೆ ಹೇರಲು ನಿರಾಕರಿಸಿರುವ ಸುಪ್ರೀಂಕೋರ್ಟ್ ಈ ಕಾಯಿದೆ ಜಾರಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿದೆ.
ಕಾನೂನು ಜಾರಿಗೆ ತಡೆ ಹೇರಬೇಕು. ಈ ಕಾನೂನು ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯಕಾರಿ ಧೋರಣೆ ಹೊಂದಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.
ಈ ವಿವಾದಿತ ಕಾಯಿದೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ 237 ಅರ್ಜಿಗಳ ವಿಚಾರಣೆಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ಪೀಠ ನಡೆಸಿದೆ. ಪೀಠದಲ್ಲಿ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲ ಮತ್ತು ಮನೋಜ್ ಮಿಶ್ರಾ ಸಹ ಇದ್ದಾರೆ.
ಸಿಎಎ ಪ್ರಶ್ನಿಸಿ ಅರ್ಜಿ ಸಲ್ಲಿಸಿದವರಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಡೆಮಾಕ್ರೆಟಿಕ್ ಯುತ್ ಫೆಡರೇಷನ್ ಆಫ್ ಇಂಡಿಯಾ, ಕಾಂಗ್ರೆಸ್ ನಾಯಕ ಜೈರಾಂ ರಮೇಶ್, ತೃಣಮೂಲ ನಾಯಕಿ ಮಹುವಾ ಮೊಯಿತ್ರಾ ಮತ್ತು ಎಐಎಂಐಎ ಮುಖ್ಯಸ್ಥ ಅಸದುದ್ದೀನ್ ಉವೈಸಿ ಸೇರಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth