ಐತಿಹಾಸಿಕ ಉಡುಪಿಯ ಹಳೆಯ ಸಬ್ ಜೈಲು ಕಟ್ಟಡ ಉಳಿಸಲು ಕಲಾವಿದರು, ಆರ್ಕಿಟೆಕ್ಟ್ ಗಳಿಂದ ವಿಶೇಷ ಅಭಿಯಾನ - Mahanayaka

ಐತಿಹಾಸಿಕ ಉಡುಪಿಯ ಹಳೆಯ ಸಬ್ ಜೈಲು ಕಟ್ಟಡ ಉಳಿಸಲು ಕಲಾವಿದರು, ಆರ್ಕಿಟೆಕ್ಟ್ ಗಳಿಂದ ವಿಶೇಷ ಅಭಿಯಾನ

udupi
03/07/2023

ಸ್ವಾತಂತ್ರ ಪೂರ್ವದಲ್ಲಿ ನಿರ್ಮಾಣಗೊಂಡ ಸರಿಸುಮಾರು 117 ವರ್ಷಗಳ ಇತಿಹಾಸ ಇರುವ ಉಡುಪಿಯ ಹಳೆಯ ಸಬ್ಜೈಲು ಕಟ್ಟಡ ಇನ್ನು ಕೆಲವೇ ದಿನಗಳಲ್ಲಿ ಧರೆಗೆ ಉರುಳಲಿದೆ. ಈ ಪಾರಂಪರಿಕ ಕಟ್ಟಡವನ್ನು ರಕ್ಷಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಪ್ರಯತ್ನ ಹಾಗೂ ಅಭಿಯಾನಗಳು ನಡೆಯುತ್ತಿವೆ.

ಹಳೆಯ ಅತ್ಯಂತ ಸುಂದರವಾದ ಈ ಕಟ್ಟಡವನ್ನು ಉಳಿಸಲು ಆರ್ಕಿಟೆ ಕ್ಟ್ಗಳು ಹಾಗೂ ಕಲಾವಿದರು ಮುಂದಾಗಿದ್ದಾರೆ. ಅದಕ್ಕಾಗಿ ವಿಶಿಷ್ಟ ರೀತಿಯ ಅಭಿಯಾನವನ್ನು ಅವರು ಹಮ್ಮಿಕೊಂಡಿದ್ದಾರೆ.

ಇಂಡಿಯನ್ ನ್ಯಾಶನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್(ಇಂಟ್ಯಾಕ್) ಇದರ ಮಂಗಳೂರು ಶಾಖೆ ಹಾಗೂ ಉಡುಪಿ ಉಪಶಾಖೆಯ ಏಳೆಂಟು ಸದಸ್ಯ ಆರ್ಕಿಟೆಕ್ಟ್(ವಾಸ್ತುಶಿಲ್ಪಿಗಳು)ಗಳು ಕಳೆದ ಒಂದು ವಾರಗಳಿಂದ ಈ ಕಟ್ಟಡದ ರಚನೆಯ ಬಗ್ಗೆ ದಾಖಲೀಕರಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರೊಂದಿಗೆ ಉಡುಪಿ ಮತ್ತು ಮಂಗಳೂರಿನ 12 ಕಲಾವಿದರು ಸೇರಿಕೊಂಡು ಈ ಕಟ್ಟಡದ ಕಲಾಕೃತಿಗಳನ್ನು ತಮ್ಮ ಕುಂಚದಲ್ಲಿ ರಚಿಸಿ ಜಾಗೃತಿ ಮೂಡಿಸುತ್ತಿದ್ದಾರೆ.

ಈ ಕಟ್ಟಡವನ್ನು ರಕ್ಷಣೆ ಮಾಡುವುದು ನಮ್ಮ ಆದ್ಯತೆ ಆಗಿದೆ. ಇಲ್ಲದಿದ್ದರೆ ಇದನ್ನು ನೆಲಸಮಗೊಳಿಸುವ ಪ್ರಕ್ರಿಯೆಯನ್ನಾದರೂ ಮುಂದೂಡಲಿ ಎಂಬುದು ನಮ್ಮ ಮನವಿ. ಯಾಕೆಂದರೆ ಇದರ ದಾಖಲೀಕರಣ ಮಾಡಲು ಇನ್ನಷ್ಟು ಸಮಯ ಅವಕಾಶ ಬೇಕು ಎನ್ನುತ್ತಾರೆ ಆರ್ಕಿಟೆಕ್ಟ್ ಶರ್ವಾನಿ ಭಟ್.

ಉಡುಪಿಯ ಹೃದಯ ಭಾಗದಲ್ಲಿರುವ ಈ ಹಳೆಯ ಕಟ್ಟಡ ಉಡುಪಿಯ ಆಸ್ತಿಯಾಗಿದೆ. ಇದನ್ನು ನೆಲಸಮಗೊಳಿಸಲು ಅವಕಾಶ ನೀಡದೆ ಪರ್ಯಾಯವಾಗಿ ಮ್ಯೂಸಿಯಂ ಅಥವಾ ಪಾರಂಪರಿಕ ವಸ್ತುಸಂಗ್ರಹಾಲಯ ಅಥವಾ ಸಾಂಸ್ಕೃತಿಕ ಕೇಂದ್ರವನ್ನಾಗಿ ಮಾಡಬೇಕು ಎಂದು ಕಲಾವಿದ ಜನಾರ್ದನ ಹಾವಂಜೆ ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ