ವಿದ್ಯುತ್ ಶಾಕ್ ತಗಲಿ ವಿದ್ಯಾರ್ಥಿ ಸಾವು ಪ್ರಕರಣ: 8 ಮಂದಿ ಸಸ್ಪೆಂಡ್ - Mahanayaka
6:06 AM Wednesday 23 - October 2024

ವಿದ್ಯುತ್ ಶಾಕ್ ತಗಲಿ ವಿದ್ಯಾರ್ಥಿ ಸಾವು ಪ್ರಕರಣ: 8 ಮಂದಿ ಸಸ್ಪೆಂಡ್

tree
16/06/2024

ಚಿಕ್ಕಮಗಳೂರು: ನೇರಳೆ ಮರದಲ್ಲಿ ಹಣ್ಣು ಕೀಳಲು ಮರ ಹತ್ತಿದ್ದ ಬಾಲಕನೋರ್ವ ವಿದ್ಯುತ್ ಶಾಕ್ ತಗಲಿ ಮೃತಪಟ್ಟ  ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಇದೀಗ  ಈ ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿ ಸೇರಿ 8 ಮಂದಿಯನ್ನು ಸಸ್ಪೆಂಡ್ ಮಾಡಲಾಗಿದೆ.

ನಿಲಯ ಪಾಲಕ ಸೇರಿ 8 ಮಂದಿ ಅಮಾನತುಗೊಳಿಸಿ ಕ್ರೈಸ್ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರವೀಣ್ ಬಿ ಬಾಗೇವಾಡಿ ಅವರು ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿತ್ತು.  7ನೇ ತರಗತಿಯ ಆಕಾಶ್ (13) ಮೃತಪಟ್ಟ ಬಾಲಕನಾಗಿದ್ದಾನೆ. ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳಲು ಮರ ಹತ್ತಿದ್ದ ವೇಳೆ ಈ ದುರ್ಘಟನೆ ನಡೆದಿತ್ತು.

ಒಟ್ಟು ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದರು.  ಈ ವೇಳೆ ಆಕಾಶ್ ಮರದಿಂದ ಜಾರಿ ಬಿದ್ದಿದ್ದ. ಜಾರಿ ಬೀಳುತ್ತಿದ್ದ ವೇಳೆ ವಿದ್ಯುತ್ ತಂತಿಯನ್ನು  ಹಿಡಿದಿದ್ದ. ಇದರಿಂದಾಗಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.

ವಿದ್ಯುತ್ ಶಾಕ್ ನಿಂದ ನೆಲಕ್ಕೆ ಬಿದ್ದಿದ್ದ ಆಕಾಶ್ ನನ್ನು ತಕ್ಷಣವೇ  ಆಸ್ಪತ್ರೆಗೆ ಸಾಗಿಸಲಾಯಿತು.  ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

ಇತ್ತೀಚಿನ ಸುದ್ದಿ