ತಮಿಳುನಾಡು ಬಿಎಸ್ಪಿ ಮುಖ್ಯಸ್ಥನ ಹತ್ಯೆ ಪ್ರಕರಣ: ಪೊಲೀಸ್ ಎನ್ ಕೌಂಟರ್ ನಲ್ಲಿ ಆರೋಪಿಯ ಹತ್ಯೆ - Mahanayaka
11:16 AM Saturday 21 - September 2024

ತಮಿಳುನಾಡು ಬಿಎಸ್ಪಿ ಮುಖ್ಯಸ್ಥನ ಹತ್ಯೆ ಪ್ರಕರಣ: ಪೊಲೀಸ್ ಎನ್ ಕೌಂಟರ್ ನಲ್ಲಿ ಆರೋಪಿಯ ಹತ್ಯೆ

14/07/2024

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ತಮಿಳುನಾಡು ಮುಖ್ಯಸ್ಥ ಕೆ ಆರ್ಮ್ಸ್ಟ್ರಾಂಗ್ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಓರ್ವನನ್ನು ಶನಿವಾರ ರಾತ್ರಿ ಎನ್ ಕೌಂಟರ್ ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಎಸ್ ಪಿ ರಾಜ್ಯ ಮುಖ್ಯಸ್ಥರ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎಂದು ಹೇಳಲಾದ ರೌಡಿ ಶೀಟರ್ ತಿರುವೆಂಗಡಮ್ ಚೆನ್ನೈನ ಮಾಧವರಂ ಬಳಿ ಪೊಲೀಸ್ ಎನ್ ಕೌಂಟರ್ ನಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೂ ಮುನ್ನ ತಿರುವೆಂಗಡಮ್ ಅವರು ಆರ್ಮ್ಸ್ಟ್ರಾಂಗ್ ಅವರನ್ನು ಹಲವು ದಿನಗಳ ಕಾಲ ಹಿಂಬಾಲಿಸಿದ್ದರು ಎನ್ನಲಾಗಿದ್ದು, ಬಿಎಸ್ಪಿ ನಾಯಕನ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇಟ್ಟಿದ್ದರು.


Provided by

ಆರ್ಮ್ಸ್ಟ್ರಾಂಗ್ ಅವರನ್ನು ಜುಲೈ 5 ರಂದು ಚೆನ್ನೈನ ಪೆರಂಬೂರ್ ಪ್ರದೇಶದ ಅವರ ನಿವಾಸದ ಬಳಿ ಆರು ಅಪರಿಚಿತ ವ್ಯಕ್ತಿಗಳು ಕೊಚ್ಚಿ ಕೊಲೆ ಮಾಡಿದ್ದರು. ಬೈಕ್ ನಲ್ಲಿ ಬಂದ ಜನರ ಗುಂಪು ಆರ್ಮ್ ಸ್ಟ್ರಾಂಗ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದು, ರಸ್ತೆಯಲ್ಲಿ ಮಾರಣಾಂತಿಕವಾಗಿ ಗಾಯಗೊಂಡಿದ್ದಾನೆ. ಬಿಎಸ್ಪಿ ಮುಖ್ಯಸ್ಥರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ